8:28 PM Thursday25 - April 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ…

ಇತ್ತೀಚಿನ ಸುದ್ದಿ

ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ ದಾಖಲು

17/10/2021, 11:10

ಕಾರ್ಕಳ (reporterkarnataka.com): ಇಲ್ಲಿನ ಒಳ್ಳೊಳ್ಳೆಯ ಗ್ರಾಮದಲ್ಲಿ ಸುಮಾರು 25 ಸಾವಿರ ರೂ. ಮೌಲ್ಯದ ದೇಶೀಯ ತಳಿಯ ಗೋವು ಕಳ್ಳತನವಾಗಿದೆ.

ಅಶೋಕ್ ನಾಯಕ್ ಎಂಬುವವರ 25000 ಮೌಲ್ಯದ ದನವೊಂದು ಕಳ್ಳತನ ವಾಗಿದ್ದು  ಇದರ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  

ಪಳ್ಳಿಯ ಅಶೋಕ್ ನಾಯಕ್ ಅವರು ದೇಶಿ ತಳಿಯ ಗೋವನ್ನು ಸಾಕುತ್ತಿದ್ದು, ಎಂದಿನಂತೆ ದನವನ್ನು ಹಟ್ಟಿಯಿಂದ ಮೇಯಲು ಬಿಟ್ಟಿದ್ದು, ರಾತ್ರಯಾದರೂ ದನವು ಎಂದಿನಂತೆ ಮನೆಗೆ ವಾಪಾಸು ಬಂದಿಲ್ಲ.  ರಾತ್ರಿ ಹಟ್ಟಿಗೆ ಬಾರದೇ ಇದ್ದುದರಿಂದ ಅಶೋಕ್ ನಾಯಕ್ ಹಾಗೂ ಅವರ ಗೆಳೆಯರು  ಪಳ್ಳಿ ಪೇಟೆಯಲ್ಲಿ ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದಾರೆ ಸಿಗಲಿಲ್ಲ.

ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಸಾಧ್ಯತೆಯಿದ್ದು, 15 ರಂದು 2:00 ಗಂಟೆಯ ಸಮಯ ಒಂದು ರಿಟ್ಜ್  ಕಾರು ಪಳ್ಳಿ ಪೆಟ್ರೋಲ್ ಪಂಪ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಸ್ವಲ್ಪ ಸಮಯ ನಿಂತಿದ್ದು ಬಳಿಕ ಕಾರು ಉಡುಪಿ ಕಡೆಗೆ ತೆರಳಿರುವ ದೃಶ್ಯಾವಳಿಗಳು  ಪೆಟ್ರೋಲ್ ಪಂಪ್‌ನ ಸಿಸಿ ಟಿವಿ ಕ್ಯಾಮೇರಾದಲ್ಲಿ  ಸೆರೆಯಾಗಿರುವುದನ್ನು ಅಶೋಕ ನಾಯಕ್  ಹಾಗೂ ಗೆಳೆಯ ರಾಜೇಶ್ ಆಚಾರ್ಯರವರು ನೋಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು