6:46 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಶಾಲೆ ಗಂಟೆ ಬಾರಿಸಲು ಮುಹೂರ್ತ ಫಿಕ್ಸ್: 1ರಿಂದ 5ನೇ ತರಗತಿ ವರೆಗೆ ಅಕ್ಟೋಬರ್ 25ರಿಂದ ಕ್ಲಾಸ್ ಆರಂಭ; ಆನ್ ಲೈನ್ ಗೂ ಅವಕಾಶ

18/10/2021, 20:21

ಬೆಂಗಳೂರು(reporterkarnataka.com): ಪ್ರಾಥಮಿಕ ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಈ ಹಿಂದೆಯೇ ಹೇಳಿತ್ತು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್  25ರಂದು ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಹೂರ್ತ ಫಿಕ್ಸ್ ಮಾಡಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಿದ್ದು, ಅಕ್ಟೋಬರ್ 20ಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 1ರಿಂದ 5ನೇ ತರಗತಿಗಳನ್ನು ಆರಂಭಿಸುವ ಕುರಿತು ಕೊರೊನಾ ತಾಂತ್ರಿಕ ಸಮಿತಿ ಸಲಹೆ ಮಾಡಿದೆ.

1ರಿಂದ 5ನೇ ತರಗತಿ ವರೆಗೆ ಅಕ್ಟೋಬರ್  25ರಿಂದ ಆರಂಭವಾಗಲಿದೆ. ಆದರೆ ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆತ್ತವರ ಒಪ್ಪಿಗೆ ಕಡ್ಡಾಯವಾಗಿದೆ. ಹಾಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ತರಗತಿಗೂ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು