4:44 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಸೀರಿಯನ್ನುಟ್ಟ ಕಿನ್ನರಿಯರಿಂದ ಸೀಗೆಹುಣ್ಣಿಮೆ ಸಂಭ್ರಮ: ಅಪ್ಪಟ ಗ್ರಾಮೀಣ ಸೊಗಡಿನ ಸಣ್ಣ ಗೌರಿಹಬ್ಬ

21/10/2021, 08:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಹಿಂದೂ ಸಂಪ್ರದಾಯದಲ್ಲಿ ಧಾರ್ಮಿಕಾಚರಣೆಗಳಿಗೆ ಲೆಕ್ಕವಿಲ್ಲ, ಗ್ರಾಮೀಣ ಭಾಗದ ರೈತಾಪಿ ವರ್ಗಕ್ಕೆ ಅಮವಾಸ್ಯೆ ಹುಣ್ಣಿಮೆಗೂ ವಿಶೇಷ ಸ್ಥಾನಮಾನ ಕಲ್ಪಿಸಲಾಗಿರುತ್ತೆ.ಅಂತೆಯೇ ಸೀಗೆಹುಣ್ಣಿಮೆ ಸಣ್ಣ ಗೌರಿಹಬ್ಬ ಎಂದು ಕರೆಸಿಕೊಳ್ಳುವ ಕಿನ್ನರಿಯರ ಹಬ್ಬವಾಗಿದೆ.

ದಸರಾ ಹಬ್ಬದ ನಂತರದಲ್ಲಿಯೇ ಗರಿಗೆದರುವ ಸೀಗೆಹುಣ್ಣಿಮೆ ಅಪ್ಪಟ ಗ್ರಾಮೀಣ ಸೊಗಡಿನ ಕಿನ್ನರಿಯರ ಹಬ್ಬವಾಗಿದೆ. 

ಕಿನ್ನರಿಯರು ಹಿರಿಯರ ಹೆಂಗಳೆಯರ ಸೀರೆಯನ್ನುಟ್ಟು, ದೀಪಗಳೊಂದಿಗೆ  ಸಕ್ಕರಾರತಿಯನ್ನು  ಇಟ್ಟುಕೊಂಡು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿರುವ ಶ್ರೀಗೌರಿ ಮೂರ್ತಿ ಗೆ ಬೆಳಗುವ ಸಾಂಪ್ರದಾಯಿಕ ಹಬ್ಭ ಇದಾಗಿದೆ. ಸೀಗೆ ಹುಣ್ಣಿಮೆಯಂದು ಕೂಡ್ಲಿಗಿ ಪಟ್ಟಣ ಸೇರಿದಂತೆ ಕೂಡ್ಲಿಗಿ ತಾಲೂಕು, ವಿವಿಧೆಡೆಯ ಗ್ರಾಮೀಣ ಭಾಗಗಳಲ್ಲಿ ಮಕ್ಕಳು ತಮ್ಮ ಹೆತ್ತವುರು ತೊಡಿಸಿದ ಸೀರೆಯನ್ನುಟ್ಟು ಗೌರಿಯನ್ನಾರಾಧಿಸಿ ಸಂಭ್ರಮಿಸಿದರು. ಸೀಗೆ ಹುಣ್ಣಿಮೆ ಹಲವೆಡೆಗಳಲ್ಲಿ ಸೀಗೆ ಹುಣ್ಣಿಮೆ ಎಂದರೆ ಮತ್ತಿತರೆ ಕಡೆಗಳಲ್ಲಿ ಸಣ್ಣಗೌರಿಹಬ್ಬ ಎಂದೇ ಪ್ರತೀತಿ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು