6:00 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ

22/10/2021, 09:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ.

ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್ಲ. ಹೀಗಾದರೆ ದೇಶಕ್ಕೆ ಅನ್ನ ಹಾಕು ರೈತನ ಪಾಡು ಹೇಗೆ ಎಂದು ಮಸ್ಕಿ ರೈತ ಸಂಘದ ಅಧ್ಯಕ್ಷ ವಿಜಯ್ ಬಡಿಗೇರ್ ಆಕ್ರೋಶ ವ್ಯಕ್ತ ಪಡಿಸಿದರು.

ಮಸ್ಕಿಯಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಕೃಷಿ ಕೇಂದ್ರ ಯಾರು ವಾಸವಿರದ ಜಾಗದಲ್ಲಿದೆ. ಜನರು ಅಲ್ಲಿಂದ ನಡೆದುಕೊಂಡು ಬರಬೇಕು. ಅಲ್ಲದೆ ರೈತರಿಗೆ ಬೇಕಾಗುವ ಕೃಷಿಗೆ ಅಗತ್ಯ ವಸ್ತುಗಳು ಸಿಗುವುದೇ ಇಲ್ಲ. ಟ್ಯಾಕ್ಟರ್, ಬಿತ್ತುವ ಯಂತ್ರೋಪಕರಣಗಳು ಅರ್ಜಿ ಹಾಕಿ ಎರಡು ವರ್ಷಗಳಾದರೂ ಇನ್ನು ಬಂದಿಲ್ಲ. ಹೀಗಾದರೆ ರೈತರ ಪಾಡೇನು. ರೈತರಿಗೆ ಅನುಕೂಲವಾಗದ ಕೃಷಿ ಕೇಂದ್ರ ಇದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು

ಮುತ್ತಿಗೆ ಹಾಕಿದರು. ಕೃಷಿ ಅಧಿಕಾರಿಗಳು ಮನವಿ ಪತ್ರಕ್ಕೆ ಸ್ಪಂದಿಸಿ ರೈತರು ಅನುಕೂಲವಾಗುವ ರೀತಿಯಲ್ಲಿ ಕೊಡಲಾಗುವುದು ಎಂದು ಹೇಳಿದರು.

ಅಮೀನ್ ಪಾಸ್ ದಿದ್ದಿಗಿ ಮಾತನಾಡಿ, ರೈತನ ಬಾಳು ಕಣ್ಣೀರಿನ ಗೋಳು. ರೈತ ಹೊಲದಲ್ಲಿ ಬೆಳೆದ ಬೆಳಗೆ ಬಂದ ಹಣ ದಲ್ಲಾಳಿಗಳು ತಿನ್ನುವ ಪರಿಸ್ಥಿತಿ ರೈತರಿಗೆ ಎದುರಾಗಿದೆ. ಸರಕಾರ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಸಮರ್ಪಕವಾದ ಬೀಜಗಳನ್ನು, ಸಮರ್ಪಕ ಯಂತ್ರೋಪಕರಣಗಳ ರೈತರಿಗೆ ಒದಗಿಸಿಕೊಡಬೇಕೆಂದು ಅಧಿಕಾರಿಗಳ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ರೈತ ಮುಖಂಡರು ಭಾಗವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು