7:33 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಕವನ : ನಮ್ಮ ನಡೆ ಶಾಲೆ ಕಡೆ | ಉಮಾ ಮಾಧವಿ

23/10/2021, 16:49

ಅಂದು ,
ಸಂಚಾರಿ ವಾಣಿಯನ್ನು ಮುಟ್ಟಿ ನೋಡಲು 
ಬಿಡದ ಹಿರಿಯರು,
ಆದರೆ ಚಿಣ್ಣರಿಗೆ ಬಲು ಆಸೆ 
ಏನಿರಬಹುದು? ಅದರಲ್ಲಿ ತಿಳಿವಾಸೆ
ಚಿಣ್ಣರು ಜಾಣರು ಗುಟ್ಟೆಲ್ಲಾ ಬಲ್ಲರು 

ಇಂದು ,
 ಅದೇ ಹಿರಿಯರು ಬನ್ನಿ ವೀಡಿಯೋ ಪಾಠ
ನೋಡಿ ಎಂದರು
ಚಿಣ್ಣರಿಗೆ ವೀಡಿಯೋ ನೋಡಿ ನೋಡಿ ಕಣ್ಣಾಲಿಗಳು ಸೋತವು, ಜೇಡರ ಬಲೆಯಂತೆ
ಕಣ್ಣೆಲ್ಲ ಮಯ ಮಯ 

ಯಾರಿಗೆ ಬೇಕು ?ಈ ವಾಣಿ
ವರ್ಕ್ ಉಂಟು, ನೆಟ್ ಇಲ್ಲ, ವೈಫೈ ಹಾಕಿಲ್ಲ
ಆನ್ಲೈನ್ ಪಾಠದ ಗೋಳು ತಲೆಯೆಲ್ಲಾ ಹಾಳು  .

ಹೌದು 
ಅಂದು ಈ ಚಿಣ್ಣರು ಕಾಯುತ್ತಿದ್ದರು
ಶಾಲೆಗೆ ಯಾವಾಗ ರಜೆ.
ಇಂದು ಬಕಪಕ್ಷಿಯಂತೆ ಕಾಯುವರು
ಶಾಲೆ ಯಾವಾಗ ಎಂದು 
ಸುದ್ದಿ ಬಂತು
 ಶಾಲೆ ಆರಂಭವಾಗುವುದೆಂದು, ಕೇಳಿದ್ದೇ ತಡ ,ಚಿಣ್ಣರು
 ಸಂಚಾರಿವಾಣಿ ಯನ್ನು ಎತ್ತಿ ಹಾಕಿ 
ನಮಸ್ಕಾರ -ಎಂದಿಗೂ ನಿನ್ನ ಸಹವಾಸ ಬೇಡಪ್ಪ ಎನ್ನುತ್ತಾ 
ಖುಷಿ ಖುಷಿಯಿಂದ ಚಿಣ್ಣರೆಲ್ಲ ಒಟ್ಟುಗೂಡಿ
 ಹೆಗಲ ಮೇಲೆ ಚೀಲ ಹಾಕಿ ನಿಷ್ಕಲ್ಮಶ 
ನಗುವಿನೊಂದಿಗೆ ಹೊರಟಿದ್ದಾರೆ.

 ತರಗತಿಯಲ್ಲಿ ಪಾಠ ಕೇಳುವ ಆಸೆಯಿಂದ
 ಟೀಚರನ್ನು ನೋಡುವ ಉತ್ಸಾಹದಿಂದ
 ಗೆಳೆಯರೊಡನೆ ಆಡುವ ಆತುರದಿಂದ 
ನಗುತ್ತಾ ನಗುತ್ತಾ ಹೇಳುತ್ತಾರೆ ,ಅಯ್ಯೋ ದೇವರೇ ,ಎಂದೆಂದಿಗೂ 
ಈ ಮಾರಿ ಕೊರೋನಾ ಬಾರದಿರಲಿ .
ಸದಾಕಾಲ ನಮ್ಮ ನಡೆ ಶಾಲೆ ಕಡೆಗೆ ಇರಲಿ .   

– ಉಮಾ ಮಾಧವಿ
 ನಿವೃತ್ತ ಶಿಕ್ಷಕಿ, ಕೊಳಲಗಿರಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು