3:57 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಮಂಗಳೂರು: ಓನೆಕ್ಸ್ ಪಬ್‌ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ

24/10/2021, 10:11

ಮಂಗಳೂರು(reporterkarnataka.com): ನಗರದ ಎಂ.ಜಿ. ರಸ್ತೆಯಲ್ಲಿರುವ ಓನೆಕ್ಸ್ ಪಬ್‌ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರು ಹಾಗೂ ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. 

ಪಬ್‌ನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆಯಲಾಗುತ್ತಿತ್ತು. ಜೋರಾಗಿ ಮ್ಯೂಸಿಕ್ ಬಳಸಿ ಅಕ್ಕಪಕ್ಕದ ರಸ್ತೆವರೆಗೂ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು. ಪಬ್‌ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುವುದರಿಂದ ಅಕ್ಕಪಕ್ಕದ ನಿವಾಸಿಗಳಿಗೆ, ಸುತ್ತಾಮುತ್ತಾ ಓಡಾಡುವ ವಿದ್ಯಾರ್ಥಿಗಳಿಗೆ ಮತ್ತು ಸಮೀಪದಲ್ಲೇ ಇರುವ ದೇವಸ್ಥಾನಗಳಿಗೆ ಭಕ್ತರು ಹೋಗಿ ಬರುವುದಕ್ಕೆ ತೊಂದರೆಯಾಗುತ್ತಿದೆ ಎಂಬಿತ್ಯಾದಿ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿತ್ತು.

ಸಿಸಿಬಿ ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು