7:10 AM Saturday27 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ   ತಡೆಗೋಡೆ ನಿರ್ಮಾಣ

24/10/2021, 09:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರ ವ್ಯಾಪ್ತಿಯ ಬಳಗಾನೂರ ಸಮೀಪದ ಬೆಳಿಗ್ನೋರೂ ಗ್ರಾಮದಲ್ಲಿ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ ತಡೆಗೋಡೆ ನಿರ್ಮಿಸಲಾಗಿದೆ. ಇದು ರಿಪೋರ್ಟರ್ ಕರ್ನಾಟಕ ವರದಿಯ ಫಲಶ್ರುತಿ ಆಗಿದೆ.

ಅಧಿಕಾರಿಗಳಲ್ಲಿ ನಾಗರಿಕರು ಹಲವು ಬಾರಿ ವಿನಂತಿ ಮಾಡಿದರೂ ಕ್ಯಾರೇ ಮಾಡದಿರುವುದನ್ನು ಕಂಡು ನಾಗರಿಕರು ಮಾಧ್ಯಮಗಳ ಮೊರೆ ಹೋಗಿದ್ದರು. 

ತಡೆಗೋಡೆ ಇಲ್ಲದೆ ಸಂಭವಿಸಬಹುದಾದ ಅಪಾಯದ ಕುರಿತು ರಿಪೋರ್ಟರ್ ಕರ್ನಾಟಕ ಚಿತ್ರ ಸಹಿತ ಸಮಗ್ರ ವರದಿ ಪ್ರಕಟಿಸಿತ್ತು.

ತಡೆಗೋಡೆ ನಿರ್ಮಿಸದೇ ಗುತ್ತೇದಾರು ಹಾಗೆ ಕೆಲಸ ನಿಲ್ಲಿಸಿದ್ದರು. ಬಿಲ್ ಕೂಡ ಪಾವತಿ ಆಗಿತ್ತು.

ಎಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನಕ್ಕೆ ಬಂದಿರಲಿಲ್ಲ. ರಿಪೋರ್ಟರ್ ಕರ್ನಾಟಕ ಸೇರಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸೇತುವೆಗೆ ತಡೆಗೋಡೆ ನಿರ್ಮಿಸಿದ್ದಾರೆ. 

ತಡೆಗೋಡೆ ಇಲ್ಲದ ಸೇತುವೆ ತುಂಬಾ ಅಪಾಯಕಾರಿಯಾಗಿತ್ತು. ವಾಹನ ಸವಾರರು ಸ್ವಲ್ಪ ಯಾಮಾರಿಸಿದರೂ ಗುಂಡಿಗೆ ಬೀಳುವುದು ಖಂಡಿತಾ. ಅದಲ್ಲದೆ ಸಮೀಪದಲ್ಲೇ ಶಾಲೆ ಇದೆ. ಇಲ್ಲಿನ ನೂರಾರು ಮಕ್ಕಳು ಇದೇ ದಾರಿಯಾಗಿ ತೆರಳುತ್ತಿದ್ದರು. ಕೆಲವು ಮಕ್ಕಳು ಕುತೂಹಲದಿಂದ ಕೆಳಗೆ ಇಣುಕುವ ಕೆಲಸ ಮಾಡುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು