4:10 AM Tuesday23 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ ಕೌನ್ಸಿಲರ್ ಗಳು!!

25/10/2021, 22:17

ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ಮಾಸಿಕ ಸಭೆ ಸೋಮವಾರ ಪುರಸಭಾ ಸಭಾಂಗಣದಲ್ಲಿ ಪ್ರತಿಭಟನೆ, ಆರೋಪ -ಪ್ರತ್ಯಾರೋಪ, ಮಾತಿನ ಚಕಮಕಿಯೊಂದಿಗೆ ನಡೆದ ನಂತರ ಕಾರ್ಕಳ ಬಂಡಿಮಠದ ಇಂದಿರಾ ಕ್ಯಾಂಟೀನ್ ನಲ್ಲಿ ಸೌಹಾರ್ದ ಸಹಭೋಜನ ನಡೆಸಲಾಯಿತು.

ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರು ಸಭೆಯ ಸಂದರ್ಭಗಳಲ್ಲಿ ಸದಸ್ಯರಿಗೆ ನೀಡುವ ಉಪಹಾರದ ಗುಣಮಟ್ಟ ಚೆನ್ನಾಗಿ ಇಲ್ಲ. ಇಂತಹ ಉಪಹಾರವನ್ನ ನಮಗೆ ನೀಡಿ ಹೆಚ್ಚಿನ ಹಣವನ್ನು ಹೋಟೆಲ್ ಗಳಿಗೆ ಪಾವತಿಸುತ್ತೀರ ಎಂದು ವ್ಯಂಗ್ಯ ವಾಗಿ ಸಭೆಯಲ್ಲಿ ಸದಸ್ಯರನ್ನು ನಗಿಸಿದ್ದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರೊಬ್ಬರು ಉಪಹಾರ, ಊಟ ಮುಂದಿನ ಸಭೆಗೆ ಇಂದಿರಾ ಕ್ಯಾಂಟೀನ್ ನಿಂದ ತರಿಸುವ ಎಂದು ಪ್ರತ್ಯುತ್ರರ ನೀಡಿದರು. ಅದನ್ನೇ ಮುಖ್ಯ ವಿಷಯವಾಗಿ ತೆಗೆದುಕೊಂಡು ಸದಸ್ಯರು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ನಿಂದಲೇ ಊಟದ ವ್ಯವಸ್ಥೆ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಆದರೆ ಪಾರ್ಸೆಲ್ ವ್ಯವಸ್ಥೆ ಇಲ್ಲದ ಕಾರಣ ಪುರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಗೆ ತೆರಳಿ ಮಧ್ಯಾಹ್ನದ ಭೋಜನದ ರುಚಿ ಸವಿದರು.  ಇಂದಿರಾ ಕ್ಯಾಂಟೀನ್ನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು