8:51 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ; ಜಿಲ್ಲಾ ಪೊಲೀಸ್ ವರಿಷ್ಠರೇ ಏನು ಹೇಳುತ್ತೀರಿ? 

25/10/2021, 08:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ದೇವದುರ್ಗ, ಸಿಂಧನೂರು , ಮಸ್ಕಿ, ಲಿಂಗಸಗೂರು, ಮಾನ್ವಿ ಹಾಗೂ ಗ್ರಾಮೀಣ ಪ್ರದೇಶದ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಸಾರಾಯಿ, ಮಟ್ಕಾ, ಜೂಜಾಟದ ಅಡ್ಡೆಯಾಗುತ್ತಿದೆ.

ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಮಟ್ಕಾ, ಸಾರಾಯಿ ಜೂಜಾಟ, ಇಸ್ಪೀಟ್ ಮುಂತಾದ ಅಕ್ರಮ ದಂಧೆಗಳು ರಾಜಾರೋಷವಾಗಿ ಯಾವುದೇ ಎಗ್ಗಿಲ್ಲದೆ ನಡೆಯುತ್ತಿದೆ. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಯುವಪೀಳಿಗೆ ಸಾರಾಯಿ, ಮಟ್ಕಾ  ಜೂಜಾಟದ ದಾಸರಾಗುತ್ತಿದ್ದಾರೆ. ಇದನ್ನೆಲ್ಲ ತಡೆದ ಸ್ವಸ್ಥ ಸಮಾಜ ನಿರ್ಮಿಸಬೇಕಾದ ಪೊಲೀಸ್ ಇಲಾಖೆ ಮಾತ್ರ ಕೈಕಟ್ಟಿ ಕುಳಿತಿದೆ.

ಅಕ್ರಮ ಚಟುವಟಿಕೆಗಳು ಎಲ್ಲೆಲ್ಲಿ ನಡೆಯುತ್ತಿದೆ ಎನ್ನುವುದು ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಪೋಲೀಸರಿಗೆ ಚೆನ್ನಾಗಿ ಗೊತ್ತಿದ್ದರೂ ಅವರು ತಡೆಗಟ್ಟುವ ನಿಟ್ಟಿನಲ್ಲಿ ಅಸಡ್ಡೆ ತೋರಿಸುತ್ತಿದ್ದಾರೆ. ರಾಯಚೂರಿಗೆ ಹೊಸತಾಗಿ ಬಂದ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿಯವರು ಇದಕ್ಕೆಲ್ಲ ಕಡಿವಾಣ ಹಾಕಬೇಕೆನ್ನುವುದು ನಾಗರಿಕರ ನಿರೀಕ್ಷೆಯಾಗಿದೆ.

ಸಾರಾಯಿ, ಮಟ್ಕಾ, ಜೂಜು, ಇಸ್ಪೀಟ್ ನಿಂದ ಬಡ ಕುಟುಂಬಗಳು ಒಂದೊಂದಾಗಿ ಬೀದಿಗೆ ಬಂದು ಬೀಳುತ್ತಿದೆ. ಮೊದಲೇ ಬೆಲೆಯೇರಿಕೆಯಿಂದ ತತ್ತರಿಸಿರುವ ಜನರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಬೆಳಗ್ಗೆ ಟೀ ಕುಡಿಯದಿದ್ದರೂ ಪರವಾಗಿಲ್ಲ, ಸಾರಾಯಿ ಮಾತ್ರ ಬೇಕು ಎನ್ನುವ ಪರಿಸ್ಥಿತಿಗೆ ಯುವಕರು ಬಂದು ತಲುಪಿದ್ದಾರೆ. ಯುವಜನಾಂಗ ಬೆಳಗ್ಗೆಯಾಗುತ್ತಿದ್ದಂತೆ ಸಾರಾಯಿ ಅಂಗಡಿ ಕಾಯುತ್ತಿರುತ್ತಾರೆ. ಹೆಂಡತಿಯ ಬಂಗಾರ ಅಡವಿಟ್ಟು, ತಾಯಿಯ ಮಾಂಗಲ್ಯ ಮಾರಿ ಮಟ್ಕಾ ಆಡುವ ಯುವಕರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದೆ. 

ಕಾಣದ ಕೈಗಳ ಆಟ: ಪೊಲೀಸ್ ಇಲಾಖೆಗೆ ಅಕ್ರಮ ಚಟುವಟಿಕೆ ತಡೆಯಲು ಕಷ್ಟವೇನಿಲ್ಲ. ಆದರೆ ಅದು ಅವರಿಗೆ ಬೇಕಾಗಿಲ್ಲ.ಕಾಣದ ಕೈಗಳ ಜತೆ ಒಪ್ಪಂದ ನಡೆದಿರುತ್ತದೆ ಎಂದು ನಾಗರಿಕರು ಆರೋಪಿಸುತ್ತಾರೆ.

ಮರಳು ದಂಧೆ : ಇವೆಲ್ಲದರ ಜತೆ ಜಿಲ್ಲೆಯ ತಾಲೂಕು ಕೇಂದ್ರಗಳ ಸಮೀಪವಿರುವ ಲಿಂಗದಹಳ್ಳಿ, ಚಿಂಚೋಡಿ, ಬಾಗೂರು, ಮುದಗೋಟ ಊರುಗಳ ಪಕ್ಕದಲ್ಲಿ ಹರಿಯುವ ಕೃಷ್ಣಾ ನದಿಯಿಂದ ಅಕ್ರಮ ಮರುಳು ಸಾಗಾಟ ನಿರಂತರವಾಗಿ ನಡೆಯುತ್ತಿದೆ. ಸರಕಾರದ ಕಣ್ಣು ತಪ್ಪಿಸಿ ಮರುಳುಗಾರಿಕೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು