8:11 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್ ಬಂಧನಕ್ಕೆ ಪೊಲೀಸರು ವಿಫಲ; ನಿರೀಕ್ಷಣಾ ಜಾಮೀನಿಗೆ ಅರ್ಜಿ

26/10/2021, 08:20

ಮಂಗಳೂರು( reporterkarnataka.com): ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಂಟರ್ನಶಿಪ್ ವಿದ್ಯಾರ್ಥಿನಿ 

ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿ ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ. ಈ ನಡುವೆ ಆರೋಪಿ ರಾಜೇಶ್ ಭಟ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜೇಶ್ ಭಟ್ ಅಕ್ಟೋಬರ್ 21ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ(ಅ.25) ಮೊದಲ ವಿಚಾರಣೆ ನಡೆದಿತ್ತು. 

ಉತ್ತರ ಪ್ರದೇಶ ಮೂಲದ ಕಾನೂನು ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ವರ್ಶಿಸಿದ ಹಾಗೂ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪಕ್ಕೆ ರಾಜೇಶ್ ಭಟ್ ಗುರಿಯಾಗಿದ್ದಾರೆ. ಇಂಟರ್ನಶಿಪ್ ವಿದ್ಯಾರ್ಥಿನಿಯನ್ನು ರಾತ್ರಿ 8 ಗಂಟೆ ತನಕ ಕಚೇರಿಯಲ್ಲಿ ಇರುವಂತೆ ರಾಜೇಶ್ ಭಟ್ ಸೂಚಿಸಿದ್ದರಂತೆ. ಅಷ್ಟು ಹೊತ್ತಿನವರೆಗೆ ಯಾಕೆ ನಿಲ್ಲಬೇಕೆಂದು ವಿದ್ಯಾರ್ಥಿನಿ ಪ್ರಶ್ನಿಸಿದರೆ, 8 ಗಂಟೆ ತನಕ ಎಲ್ಲರೂ ಕಚೇರಿಯಲ್ಲಿರುತ್ತಾರೆ ಎಂದು ಉತ್ತರಿಸಿದ್ದಂತೆ. ಅಂದು ರಾತ್ರಿ ರಾಜೇಶ್ ಭಟ್ ವಿದ್ಯಾರ್ಥಿನಿಯನ್ನು ತನ್ನ ಛೇಂಬರೊಳಗೆ ಕರೆಸಿ ಅಸಭ್ಯವಾಗಿ ವರ್ತಿಸಿ, ವಿದ್ಯಾರ್ಥಿನಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇದಾದ ಬಳಿಕ ರಾಜೇಶ್ ಭಟ್ ಮೆಸೇಜ್ ಹಾಗೂ ಕರೆ ಮಾಡಿ ಮುಂದೆಂದೂ ಇಂತಹ ತಪ್ಪು ಮಾಡುವುದಿಲ್ಲ. ನೀನು ಮತ್ತೆ ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್ ಭಟ್ ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು