5:26 AM Tuesday23 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

‘ಕಾಣದಂತೆ ಮಾಯವಾದನು ನಮ್ಮ ಶಿವ..’ ಹಾಡಿ ಕುಣಿದ ಪೋರ ಈ ‘ರಾಜಕುಮಾರ’

29/10/2021, 15:26

ಅಶೋಕ್ ಕಲ್ಲಡ್ಕ ಮಂಗಳೂರು
info.reporterkarnataka@gmail.com

ಪುನೀತ್ ರಾಜ್ ಕುಮಾರ್…

ಕನ್ನಡದ ವರನಟ ಡಾ. ರಾಜ್ ಕುಮಾರ್ – ಪಾರ್ವತಿಯಮ್ಮ ದಂಪತಿಯ ಕೊನೆಯ ಪುತ್ರ. ಚಿಕ್ಕ ವಯಸ್ಸಿನಲ್ಲಿ ಬಣ್ಣ ಹಚ್ಚಿಕೊಂಡು ಬೆಳ್ಳಿಪರದೆಯಲ್ಲಿ ಕುಣಿದ ಪೋರ. ಅಷ್ಟೇ ಅಲ್ಲ ಬಾಲನಟನಾಗಿರುವಾಗಲೇ ಸಿನಿಮಾ ರಸಿಕರ ಹೃದಯಕ್ಕೆ ಲಗ್ಗೆ ಹಾಕಿದ ತುಂಟ.

ಡಾ. ರಾಜ್ ಕುಮಾರ್ ಹಾಗೂ ಅಂಬಿಕಾ ಅಭಿನಯದ’ಚಲಿಸುವ ಮೋಡಗಳು’ ಸಿನಿಮಾ ನೋಡಿದವರಿಗೆ ಆ ದೃಶ್ಯವನ್ನು ಮರೆಯಲು ಖಂಡಿತಾ ಸಾಧ್ಯವಿಲ್ಲ. ಬಾಯಿಯಲ್ಲಿ ಮೌತ್ ಆರ್ಗಾನ್ ನುಡಿಸುತ್ತಾ ‘ಕಾಣದಂತೆ ಮಾಯಾದನು ನಮ್ಮ ಶಿವ ಕೈಲಾಸ ಸೇರಿಕೊಂಡನು’ ಎಂದು ಹಾಡಿ ಕುಣಿದು ಕುಪ್ಪಳಿಸಿದ ಅ ಅಪ್ಪುವನ್ನು ಯಾರು ತಾನೆ ಮರೆಯಲು ಸಾಧ್ಯ?. 


ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗಕ್ಕೆ ಕಾಲಿಟ್ಟ ಪುನೀತ್ ರಾಜ್ ಕುಮಾರ್ ಅವರು ಇಂದು ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅದರಲ್ಲೂ ಫ್ಯಾಮಿಲಿ ಆಡಿಯನ್ಸ್​ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು.

ಪುನೀತ್​ ರಾಜ್​ಕುಮಾರ್​ ಅವರು ಸದ್ಯ ‘ಜೇಮ್ಸ್​’ ಸಿನಿಮಾದ ಕೆಲಸಲ್ಲಿ ಬ್ಯುಸಿಯಾಗಿದ್ದರು.ಚೇತನ್​ಕುಮಾರ್​ ನಿರ್ದೇಶನದ ಸಿನಿಮಾ ಇದಾಗಿತ್ತು. ಇಷ್ಟೇ ಅಲ್ಲದೆ ಪವನ್​ಕುಮಾರ್​ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲೂ ಅಪ್ಪು ನಟಿಸುತ್ತಿದ್ದಾರೆ. ಆದರೆ ವಿಧಿಯಾಟ ಮಾತ್ರ ಬೇರೆಯೇ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು