4:30 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

10 ಲಕ್ಷ ನೀಡುವಂತೆ ಕ್ವಾರೇ ಮಾಲೀಕನಿಗೆ ಬೆದರಿಕೆ: ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

31/10/2021, 09:26

ಉಡುಪಿ(reporterkarnataka.com):
ಬೆಳ್ಮಣ್ ಪರಿಸರದ ಕ್ವಾರೇ ಮಾಲೀಕರೊಬ್ಬರಿಗೆ 10 ಲಕ್ಷ ನೀಡುವಂತೆ ಬೆದರಿಕೆಯೊಡ್ಡಿದ ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ರವಿ ಶೆಟ್ಟಿ ಬೈಂದೂರು ಎಂಬಾತ 10 ಲಕ್ಷ ಬೇಡಿಕೆ ಇಟ್ಟಿರುವುದಾಗಿ ಶ್ರೀದುರ್ಗಾ ಕ್ರಶರ್‌ನ ಮಾಲೀಕರಾದ ಬೆಳ್ಮಣ್ ಪೇರಲ್‌ಪಾದೆಯ ನಿತ್ಯಾನಂದ ಶೆಟ್ಟಿ ಕಾರ್ಕಳ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ರವಿ ಶೆಟ್ಟಿ ಸೆ. 10ರಂದು ನನ್ನ ಮೊಬೈಲ್‌ಗೆ ಕರೆ ಮಾಡಿ, ನಾನು ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಎಂದು ಪರಿಚಯ ಮಾಡಿಕೊಂಡಿದ್ದನು. ಆ ಬಳಿಕ ಅಕ್ಟೋಬರ್ 26ರಂದು ನಾನು ಬೆಳ್ಮಣ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಇದ್ದಾಗ ಇನೋವಾ ಕಾರಿನಲ್ಲಿ ರವಿ ಶೆಟ್ಟಿ ಅಲ್ಲಿಗೆ ಬಂದಿದ್ದನು. ನಿಮ್ಮ ಹಾಗೂ ನಿಮ್ಮ ಪಕ್ಕದಲ್ಲಿರುವ ಜೆ.ಎಲ್. ಕ್ರಶರ್‌ನ ಮಾಲೀಕ ಲ್ಯಾನ್ಸಿ ಡಿಕೋಸ್ತಾ ಒಟ್ಟು ಸೇರಿ 10 ಲಕ್ಷ ಮೊತ್ತವನ್ನು ತನಗೆ ನೀಡಬೇಕು. ಇಲ್ಲದಿದ್ದರೆ ನಿಮ್ಮ ಕ್ರಶರನ್ನು ಮುಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದನು ಎಂದು ನಿತ್ಯಾನಂದ ದೂರಿನಲ್ಲಿ ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ನನ್ನ ಕ್ರಶರ್ ಬಳಿ ಮೂವರು ಗಂಡಸರು ಹಾಗೂ ಓರ್ವ ಮಹಿಳೆ ಕಾರಿನಲ್ಲಿ ಆಗಮಿಸಿ, ಕ್ರಶರ್‌ನ ಹಾಗೂ ಪಾದೆಯ ಫೋಟೋ ತೆಗೆಯುತ್ತಿರುವ ವಿಷಯ ತಿಳಿಯಿತು. ಸ್ಥಳಕ್ಕೆ ಹೋಗಿ ನೋಡಿದಾಗ ರವಿ ಶೆಟ್ಟಿ ಹಾಗೂ ಆತನ ಸಹಚರರು ಯಾವುದೋ ದುರುದ್ದೇಶ ಪೂರಕವಾಗಿ ಈ ಕೃತ್ಯ ನಡೆಸುತ್ತಿದ್ದು, ಅವರಲ್ಲಿ ವಿಚಾರಿಸಿದಾಗಿ 5 ಲಕ್ಷ ಬೇಡಿಕೆ ಮುಂದಿಟ್ಟಿದ್ದಾರೆ. ಇಲ್ಲವಾದರೆ ಕ್ರಶರ್‌ರನ್ನು ಮುಚ್ಚಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು