6:26 AM Saturday27 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಆಡಳಿತರೂಢ ಬಿಜೆಪಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ: ಸಿಂದಗಿಯಲ್ಲಿ ಕೇಸರಿಗೆ ಗೆಲುವು; ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಜಯ

02/11/2021, 16:03

ಬೆಂಗಳೂರು(reporterkarnataka.com): ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಒಂದೆಡೆ ಖುಷಿಯಾದರೆ ಇನ್ನೊಂದೆಡೆ ದುಃಖದ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೊದಲ ಅಗ್ನಿಪರೀಕ್ಷೆ ಇದಾಗಿತ್ತು.

ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಿಂದ ಆಡಳಿತರೂಢ ಬಿಜೆಪಿ ಗೆಲುವು ಸಾಧಿಸಿದರೆ, ಹಾನಗಲ್ ಕ್ಷೇತ್ರದಲ್ಲಿ ಕೇಸರಿ ಪಕ್ಷ ಕಾಂಗ್ರೆಸ್ ಎದುರು ಸೋಲು ಅನುಭವಿಸಿದೆ.

ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸಿದ್ದಾರೆ.

ಬಿಜೆಪಿಯಿಂದ ರಮೇಶ್ ಭೂಸನೂರು, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸೇರಿದಂತೆ 6 ಅಭ್ಯರ್ಥಿಗಳು ಕಣದಲ್ಲಿದ್ದರು.

ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಶಿವರಾಜ್ ಸಜ್ಜನರ ಅವರು ಕಾಂಗ್ರೆಸ್ ಶ್ರೀನಿವಾಸ್ ಮಾನೆ ಎದುರು ಸೋಲು ಅನುಭವಿಸಿದ್ದಾರೆ. ಜೆಡಿಎಸ್ ನಿಂದ ನಿಯಾಜ್ ಶೇಕ್ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು