12:59 PM Wednesday24 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ…

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಸಂಭ್ರಮದ  66ನೇ ಕನ್ನಡ ರಾಜ್ಯೋತ್ಸವ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

02/11/2021, 11:58

ಮಂಗಳೂರು(reporterkarnataka news): ಬಂಟ್ವಾಳ ತಾಲೂಕಿನ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ ಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ  ಸೀಮಾ ಮರಿಯ ಡಿಸೋಜ ಅವರು ವಹಿಸಿದ್ದರು.

ಶಿಕ್ಷಕಿ ಮಾಲಿನಿ ಮಾತನಾಡಿ,ಕರ್ನಾಟಕ ಏಕೀಕರಣ ಹೋರಾಟ ,ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆ ತಿಳಿಸಿದರು.ಶಾಲಾ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣವನ್ನು ಮಾಡಿದರು.ಕನ್ನಡ ನಾಡುನುಡಿಯನ್ನು ವರ್ಣಿಸುವ ಹಾಡುಗಳನ್ನು ಹಾಡಲಾಯಿತು. ಕನ್ನಡ ರಾಜ್ಯೋತ್ಸವ, ಕರ್ನಾಟಕ ಏಕೀಕರಣ ಹೋರಾಟ, ಕನ್ನಡ ನಾಡು-ನುಡಿಯ ಬಗ್ಗೆ ಸವಿವರವಾಗಿ ಅವರು ಮಕ್ಕಳಿಗೆ ತಿಳಿಸಿದರು.

ಕನ್ನಡ ಭಾಷಾ  ಶಿಕ್ಷಕಿ ಜಯಲಕ್ಷ್ಮಿ ಮಾತನಾಡಿ,ಕನ್ನಡ ಭಾಷೆ ಸಂಸ್ಕೃತಿ ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುತ್ತಾ ಕನ್ನಡವನ್ನು ಉಳಿಸುವಲ್ಲಿ ಎಲ್ಲರೂ  ಪ್ರಯತ್ನ ಪಡಬೇಕೆಂದು ತಿಳಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  ಕನ್ನಡ  ಶಿಕ್ಷಕಿ ಜಯಲಕ್ಷ್ಮಿ ಎಲ್ಲಾ ಅತಿಥಿಗಳನ್ನು ಕನ್ನಡ ಶಾಲು ಹೊದಿಸುವ ಮೂಲಕ ಸ್ವಾಗತಿಸಿದರು.

ಶಾಲಾ ಶಿಕ್ಷಕರಾದ ಶ್ರೀಯುತ ಪ್ರಭಾಕರ್, ಸಂತೋಷ್ ಕೆ ಪಮ್ಮರ್ , ವಿನಿತ,ಪುಷ್ಪ ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು