ಇತ್ತೀಚಿನ ಸುದ್ದಿ
ಉಪ ಚುನಾವಣೆ ಫಲಿತಾಂಶದಿಂದ ಧೃತಿಗೆಟ್ಟಿಲ್ಲ, ಅಸೆಂಬ್ಲಿ ಎಲೆಕ್ಷನ್ ಗೆ ಇದು ದಿಕ್ಸೂಚಿಯಲ್ಲ: ದೇವೇಗೌಡ
02/11/2021, 22:44
ಹೊಸದಿಲ್ಲಿ(reporterkarnataka.com):
ರಾಜ್ಯದಲ್ಲಿ ನಡೆದ ಉಪ ಚುನಾವಣೆಯ. ಫಲಿತಾಂಶದಿಂದ ನಾನು ಧೃತಿಗೆಟ್ಟಿಲ್ಲ. ಅಸೆಂಬ್ಲಿ ಚುನಾವಣೆಗೆ ಇದು ದಿಕ್ಸೂಚಿಯಲ್ಲ. ಈ ದೇವೇಗೌಡರು ಇನ್ನೂ ಜೀವಂತವಾಗಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಇದೆ. ರಾಜ್ಯ ಪ್ರವಾಸ ಮಾಡುತ್ತೇನೆ. ನಾನು ಜೆಡಿಎಸ್ ಸೊರಗಿರುವ ಕ್ಷೇತ್ರಗಳ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಎಚ್. ಡಿ. ದೇವೇಗೌಡ ಹೇಳಿದರು.
ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಯಾರೂ ಅಷ್ಟು ದುಡ್ಡು ಖರ್ಚು ಮಾಡೊಕಾಗಲ್ಲ ಎಂದು ಹೊಸದಿಲ್ಲಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ದೇವೇಗೌಡರು ವಿಶ್ಲೇಷಿಸಿದರು.
ನಾನು ತಿಂಗಳಿಗೆ ಎರಡು ಜಿಲ್ಲೆಗಳ ಪ್ರವಾಸ ಮಾಡುತ್ತೇನೆ. ಕುಮಾರಸ್ವಾಮಿ ಹಳೆ ಮೈಸೂರು ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಪ್ರತಿಯೊಂದನ್ನು ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಪರೋಕ್ಷವಾಗಿ ಇದು ಅಸೆಂಬ್ಲಿ ಚುನಾವಣೆಗೆ ದಿಕ್ಸುಚಿ ಅಲ್ಲ ಎಂದು ಅವರು ಹೇಳಿದ್ದಾರೆ.