6:27 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು

03/11/2021, 16:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ

ವಿರುದ್ಧ ಹೊಸಪೇಟೆ ಚಿತ್ವಾಡ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರ ಕೂಡ್ಲಿಗಿ ತಾಲೂಕು ಈಚಲ ಬೊಮ್ಮನಹಳ್ಳಿ ಗ್ರಾಮದ 

ಸಂತೋಷ ಅವರ ನೀಡಿದ ಹೇಳಿಕೆಯಂತೆ, ಚಿತವಾಡ್ಗಿ ಪೊಲೀಸ್ ಠಾಣೆಯಲ್ಲಿ ಕೂಡ್ಲಿಗಿ ಪೊಲೀಸ್ ಕಾನ್ ಸ್ಟೇಬಲ್ ಗಳಾದ ಪೂಜಾರಹಳ್ಳಿ ಮೂಲದ ಶರಣಪ್ಪಮತ್ತು ಬಣವಿಕಲ್ಲು ಮೂಲದ ಮಂಜುನಾಥ ಎಂಬವರ ವಿರುದ್ಧ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿತರು ಅಕ್ರಮ ದಂಧೆಗಳಾದ ಅಕ್ರಮ ಮದ್ಯ ಮಾರಾಟ, ಮರಳು ಸಾಗಾಣಿಕೆಗೆ ಕುಮ್ಮಕ್ಕು ನೀಡಿದ್ದು, ಇದರಿಂದ ಬರುವ ಮಾಮೂಲು ವಸೂಲಿ ಮಾಡುತ್ತಾ ಮಾಮೂಲು ಕಮ್ಮಿಯಾದಲ್ಲಿ ತಕ್ಷಣ ಅಕ್ರಮದಲ್ಲಿ ಭಾಗಿಯಾದವರನ್ನು ಕರೆಸಿ ಹಣ ನೀಡದಿದ್ದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇವೆ ಅಂತ ಬೆದರಿಸುತ್ತಾರೆಂದು. ಈ ಬಗ್ಗೆ ನ್ಯಾಯ ಕೇಳಿದರೆ ಇವರು ತನಗೆ ಬೆದರಿಕೆ ಹಾಕಿರುವುದಾಗಿ, ಅದಕ್ಕಾಗಿ ತನಗೆ ರಕ್ಷಣೆ ನೀಡಬೇಕೆಂದು ದೂರುದಾರ 

ಸಂತೋಷ ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ದೂರು  ನೀಡಿದ್ದಾರೆ. ಅವರ ಹೇಳಿಕೆಯನ್ವಯ ಕೂಡ್ಲಿಗಿ ಪೊಲೀಸ್ ಪೇದೆಗಳಾದ ಶರಣಪ್ಪ ಹಾಗೂ ಮಂಜುನಾಥರ ವಿರುದ್ಧ,ಚಿತ್ವಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು