10:25 PM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಮಂಗಳೂರು: ದೀಪಾವಳಿ ದಿನವೇ ರಥಬೀದಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಟೂರ್ ಮೆನೇಜರ್ ಭೀಕರ ಕೊಲೆ

04/11/2021, 12:02

ಮಂಗಳೂರು(reporterkarnataka.com):

ನಗರದ ಕಾರ್ ಸ್ಟ್ರೀಟ್ ನ ಅಪಾರ್ಟ್ ವೊಂದರಲ್ಲಿ ಬುಧವಾರ ರಾತ್ರಿ ವಿನಾಯಕ ಕಾಮತ್ ಎಂಬುವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಅದೇ ಅಪಾರ್ಟ್ ಮೆಂಟಿನ ನಿವಾಸಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಮಗ ಅವಿನಾಶ್ ಕಿಣಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಮೃತರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕಾರ್ ಸ್ಟ್ರೀಟ್ ನ ವೀರವೆಂಕಟೇಶ ಅಪಾರ್ಟ್ ಮೆಂಟ್  ಈ ಹತ್ಯೆ ನಡೆದಿದೆ. ವಿನಾಯಕ ಕಾಮತ್  ಎಂಬವರು ಪತ್ನಿ ಅಮಣಿ ಕಾಮತ್, ಪುತ್ರ ಮೂರುವರೆ ವರ್ಷ ಪ್ರಾಯದ ಉತ್ತಮ ಕಾಮತ್ ಹಾಗೂ ಅತ್ತೆ ವಿಜಯಲಕ್ಷ್ಮೀ ಕಾಮತ್ ಅವರ ಜತೆ ಕಳೆದ 5 ವರ್ಷಗಳಿಂದ ಇದೇ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದರು. ಕೊಲೆ ಆರೋಪಿಗಳಾದ ಕೃಷ್ಣಾನಂದ ಕಿಣಿ ಹಾಗೂ ಅವರ ಪುತ್ರ ಅವಿನಾಶ್ ಕಿಣಿ ಕೂಡ ಇದೇ ಅಪಾರ್ಟ್ ಮೆಂಟ್ ನ ನಿವಾಸಿಗಳಾಗಿದ್ದಾರೆ. ವಿಕ್ರಮ ಟ್ರಾವೆಲ್ಸ್ ನಲ್ಲಿ ಟೂರ್ ಮೆನೇಜರ್ ಆಗಿರುವ ವಿನಾಯಕ

ಕಾಮತ್ ಅವರ ಜತೆ ಆರೋಪಿಗಳು ಈ ಹಿಂದೆ ಕ್ಷುಲ್ಲಕ ವಿಷಯಕ್ಕೆ ಜಗಳವಾಡಿದ್ದರು. ಬುಧವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಅಪಾರ್ಟ್ ಮೆಂಟ್ ನವರು ಕೆಳಗಡೆ ಪಟಾಕಿ ಸಿಡಿಸುತ್ತಿದ್ದಾಗ ವಿನಾಯಕ ಕಾಮತ್ ಕೂಡ ಅಲ್ಲಿಗೆ ಹೋಗಿದ್ದರು. ಇದೇ ವೇಳೆ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕಾರ್ ಪಾರ್ಕಿಂಗ್ ಸ್ಥಳದಲ್ಲಿ

ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದ್ದಾರೆ. ತೀವ್ರ ಗಾಯಗೊಂಡ ವಿನಾಯಕ ಕಾಮತ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30ರ ವೇಳೆಗೆ ಮೃತಪಟ್ಟಿದ್ದಾರೆ.

ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ಕೊಲೆ ಮಾಡುವ ಉದ್ದೇಶದಿಂದಲೇ ವಿನಾಯಕ ಕಾಮತ್ ಜತೆ ಜಗಳವಾಡಿ ಚೂರಿಯಿಂದ ಇರಿದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು