1:44 AM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ಗೋಪೂಜೆಯ ಶುಭ ದಿನದಂದು ಅಶಕ್ತ  ಕುಟುಂಬಗಳಿಗೆ ರವೀಂದ್ರ ಶೆಟ್ಟಿ ಬಜಗೋಳಿ ಅವರಿಂದ ‘ಗೋ ದಾನ’

06/11/2021, 16:22

ಕಾರ್ಕಳ(reporterkarnataka.com):

ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ಇತರ ಹಿಂದೂ ಮುಖಂಡರಿಗೆ ಮಾದರಿಯಾಗುವಂತಹ ಕಾರ್ಯಕ್ರಮ 
ಬಜಗೋಳಿಯಲ್ಲಿ ನಡೆಯಿತು.

ಸಂಘದ ಹಿರಿಯ ಮುಖಂಡರಾದ ಗುಣವಂತೇಶ್ ಭಟ್, ಊರಿನ ಗಣ್ಯರ ಮತ್ತು ಸಂಘ ಪರಿವಾರದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಮೂಡಿಬಂತು.

ಕರ್ನಾಟಕ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಶರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರಾದ ರವೀಂದ್ರ ಶೆಟ್ಟಿ ಬಜಗೋಳಿ
ಅವರು ಸ್ವಗೃಹದಲ್ಲಿ ಗೋಪೂಜೆ ನೆರವೇರಿಸಿದ ನಂತರ ಅಶಕ್ತ ಹಿಂದೂ ಕುಟುಂಬಗಳ ಮನೆ ಮನೆಗೆ ತೆರಳಿ ಉತ್ತಮ ತಳಿಯ, ಹೆಚ್ಚು ಹಾಲಿನ ಇಳುವರಿಯನ್ನು ಕೊಡುವ ಹಸುಗಳನ್ನು ಹಿಂದೂ ಸಾಂಪ್ರದಾಯಿಕ ವಿಧಿವಿಧಾನದ ಪ್ರಕಾರವೇ ದಾನ ಮಾಡಿದರು.

ಅನಾರೋಗ್ಯ ಪೀಡಿತರಾಗಿದ್ದ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿ ಇದ್ದ ಮನೆಗೆ ನುಗ್ಗಿ ಮೂರು ಹಸುಗಳನ್ನು ದರೋಡೆ ಮಾಡಿದ ಕೃತ್ಯ ನಡೆದ ನಂತರ ಶಿರ್ಲಾಲಿನ ಕೃಷ್ಣ ಶೆಟ್ಟಿ ದಂಪತಿ ಬದುಕು ದುಸ್ತರವಾಗಿದ್ದನ್ನು ಸುಸ್ಥಿರವಾಗಿ ಮಾಡುವ ನಿಟ್ಟಿನಲ್ಲಿ ಹಾಲು ಕೊಡುವ ಹಸು-ಕರುವನ್ನು ದಾನ ಮಾಡಲಾಯಿತು.

ದುರ್ಗ ಬೊಂಬೇದಡ್ಕ ಎಂಬಲ್ಲಿ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಗೊತ್ತಾದ ನಂತರ ಶ್ರಮಕೋರುವ ಕೆಲಸ ಮಾಡುವ ಶಿವು ಮೇರಾ ತನ್ನ ಮಡದಿ ಮತ್ತು ತನ್ನೆರಡು ಮಕ್ಕಳ ಜೀವನದ ಬಂಡಿ ಸಾಗಿಸೋದು ಹೇಗೇ ಎಂಬ ಚಿಂತೆಯಲ್ಲಿರುವಾಗಲೇ ರವೀಂದ್ರ ಶೆಟ್ಟರು ಮಾಡಿದ ಗೋ ದಾನವು ಅವರ ಮೊಗದಲ್ಲೂ ಸಂತಸದ ಕಳೆ ಮೂಡಿಸಿತು.


ಪೆರ್ವಾಜೆ ದೇವರಗುಡ್ಡೆ ಎಂಬಲ್ಲಿ ತನ್ನ ಇಳಿವಯಸ್ಸಿನಲ್ಲೂ ಬೀಡಿ ಕಟ್ಟಿ ತನ್ನ ಸಂಸಾರದ ನೌಕೆ ಸಾಗಿಸುತ್ತಿದ್ದ ಜಯಂತಿ ಮೊಗೇರ ಎಂಬ ಮಹಿಳೆಗೆ ರವೀಂದ್ರ ಶೆಟ್ರು ನೀಡಿದ ಗೋ ದಾನವು ಆಕೆಯ ಬದುಕಿಗೆ ಭದ್ರತೆಯ ಭರವಸೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು