10:22 PM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಕಾರವಾರ ಸಮುದ್ರದಲ್ಲಿ ಮಲ್ಪೆಯ ಬೋಟ್ ಗೆ ಬೆಂಕಿ ಅವಘಡ: ಎಲ್ಲ 7ಮಂದಿ ಮೀನುಗಾರರ ರಕ್ಷಣೆ

06/11/2021, 16:13

ಕಾರವಾರ(reporterkarnataka.com): ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಅದರಲ್ಲಿದ್ದ ಎಲ್ಲ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಬೆಂಕಿ ಅನಾಹುತದಿಂದ ಬೋಟ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ದುರ್ಘಟನೆ ನಡೆಯುತ್ತಿದ್ದಂತೆಯೇ ರಕ್ಷಣೆಗೆ ಧಾವಿಸಿದ ಭಾರತೀಯ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.

ಉಡುಪಿಯ ಮಲ್ಪೆಯ ವರದಾ ವಿನಾಯಕ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಕಾರವಾರ

ಲೈಟ್‌ ಹೌಸ್ ನಡುಗುಡ್ಡೆಯಿಂದ 10 ನಾಟಿಕಲ್‌ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸುದ್ದಿ ತಿಳಿದ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ, ರಕ್ಷಣೆಗೆ ಧಾವಿಸಿದ್ದಾರೆ.

ಕೂಡಲೇ ಸ್ಥಳದಲ್ಲಿದ್ದ ಇತರ ಬೋಟುಗಳ ಸಹಾಯದೊಂದಿಗೆ ಬೋಟಿನಲ್ಲಿದ್ದ ಏಳು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಬೋಟ್‌ನ ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಕಾರವಾರದ ಬೈತಖೋಲ್‌ ಬಂದರಿಗೆ ಬೋಟ್‌ನ್ನು ತರಲಾಗಿದೆ. ಮೇಲ್ನೋಟಕ್ಕೆ ಇಂಜಿನ್‌ನಲ್ಲಿನ ತಾಂತ್ರಿಕ ದೋಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಕೋಸ್ಟ್‌ ಗಾರ್ಡ್‌ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು