9:45 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ಮಹಾಮಳೆಗೆ ಚೆನ್ನೈ ತತ್ತರ: 6 ವರ್ಷದ ಬಳಿಕ ಭಾರಿ ವರ್ಷಧಾರೆ; ಕೆರೆಗಳಂತಾದ ರಸ್ತೆಗಳು; ಶಾಲಾ-ಕಾಲೇಜು ಬಂದ್

08/11/2021, 19:00

ಚೆನ್ನೈ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಜನರ ರಕ್ಷಣೆಗಾಗಿ ಎನ್‌ಡಿಆರ್‌ಎಫ್ ತಂಡವನ್ನು ನಿಯೋಜಿಸಲಾಗಿದೆ. ಶಾಲಾ – ಕಾಲೇಜುಗಳಿಗೆ 3 ದಿನ ರಜೆ ಘೋಷಿಸಲಾಗಿದೆ.

ದೀಪಾವಳಿ ಹಬ್ಬಕ್ಕೆ ಹೊರಗಡೆ ಹೋದವರು ಚೆನ್ನೈಗೆ ವಾಪಸ್ ಆಗುವುದನ್ನು ಒಂದು ದಿನ ಮುಂದೂಡುವಂತೆ ಸರಕಾರ ಮನವಿ ಮಾಡಿದೆ. ಭಾರಿ ಮಳೆಗೆ ಚೆನ್ನೈ ಮಹಾನಗರ ತತ್ತರಿಸಿ ಹೋಗಿದೆ. 

ಚೆನ್ನೈನಲ್ಲಿ ಕಳೆದ 14 ತಾಸುಗಳಿಂದ ಸುರಿದ ಭಾರಿ ಮಳೆಗೆ ಜನಜೀವನ ಬಹುತೇಕ ಅಸ್ತವ್ಯಸ್ತಗೊಂಡಿದೆ. ಚೆನ್ನೈ ಮಹಾನಗರದ ರಸ್ತೆಗಳು ಕೆರೆಗಳಂತಾಗಿವೆ. ವಾಹನ ಸವಾರರು, ನಿವಾಸಿಗಳು ಪರದಾಟ ನಡೆಸಿದ್ದಾರೆ. ಡ್ಯಾಂಗಳು ಭರ್ತಿಯಾಗಿದ್ದು, ಜಲಾಶಯಗಳಿಂದ ನೀರನ್ನು ಹೊರಬಿಡಲಾಗಿದೆ. 6 ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಈ ಪ್ರಮಾಣದಲ್ಲಿ ಮಳೆಯಾಗಿದೆ.

ಹಲವೆಡೆ ನಗರಗಳು ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಂದಿನ ಮಳೆಗಿಂತ ಈಗ ಅರ್ಧದಷ್ಟು ಮಳೆ ಸುರಿದಿದ್ದು, ಆದರೂ ನಗರ ಜಲಾವೃತವಾಗಿದ್ದು, ಜನತೆ ಪರದಾಡಿದ್ದಾರೆ. ನಗರಕ್ಕೆ ಸಂಬಂಧಿಸಿದ 3 ಜಲಾಶಯಗಳು ಭರ್ತಿ ಆಗಿದ್ದು, ನೀರು ಹೊರಬಿಡಲು ನಿರ್ಧರಿಸಲಾಗಿದೆ. ಇದೇ ವೇಳೆ ಚೆನ್ನೈ ಸನಿಹದ ಕಾಂಚೀಪುರಂ ಹಾಗೂ ತಿರುವಳ್ಳೂರು ಜಿಲ್ಲೆಗಳಲ್ಲಿ ಕೂಡ ಭಾರಿ ವರ್ಷಧಾರೆ ಸಂಭವಿಸಿದೆ.

ಭಾರತೀಯ ಹವಾಮಾನ ಇಲಾಖೆ ಸೋಮವಾರ ಸಹ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಚೆನ್ನೈ, ತಿರುವಳ್ಳೂರು, ಕಾಂಚಿಪುರಂ, ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಹಾಮಳೆಗೆ ಚೆನ್ನೈ ಮಹಾನಗರ ಸ್ತಬ್ಧವಾಗಿದ್ದು, ಏರ್ಪೋರ್ಟ್ ರನ್ ವೇ ಬಂದ್ ಮಾಡಿ, ಲೋಕಲ್ ಟ್ರೈನ್ ಗಳನ್ನು ನಿಲ್ಲಿಸಲಾಗಿದೆ.

“ಚಂಡಮಾರುತದ ಪರಿಚಲನೆಯು ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 4.5 ಕಿಮೀ ವರೆಗೆ ವಿಸ್ತರಿಸಿದೆ. ಇದರ ಪ್ರಭಾವದ ಅಡಿಯಲ್ಲಿ, ಆಗ್ನೇಯ ಬಂಗಾಳ ಕೊಲ್ಲಿ ಮತ್ತು ನೆರೆಹೊರೆಯಲ್ಲಿ 09 ನವೆಂಬರ್ 2021 ರ ಸುಮಾರಿಗೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಐಎಮ್‌ಡಿ ಹೇಳಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಲಾವೃತವಾಗಿರುವ 14 ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರ ಸ್ಥಳಾಂತರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು