6:07 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ಊಳಿಗಮಾನ್ಯ ಪದ್ಧತಿ ಪ್ರತಿಪಾದಕರ ರಾಜಕೀಯ ದಾಳವಾಗುತ್ತಿದ್ದಾರೆ: ಬಿಪಿನ್ ಚಂದ್ರ ಪಾಲ್

08/11/2021, 19:11

ಕಾರ್ಕಳ(reporterkarnataka.com): ಕಳೆದ 70 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಊಳಿಗಮಾನ್ಯ ಪದ್ಧತಿಯ ಕರಾಳ ಮುಷ್ಠಿಯಿಂದ ಹೊರಬಂದು ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ತಮಗರಿವಿಲ್ಲದಂತೆ ಇಂದು ಅದೇ ಊಳಿಗಮಾನ್ಯ ಪದ್ಧತಿಯ ಪ್ರತಿಪಾದಕರ ರಾಜಕೀಯ ದಾಳದ ವಸ್ತುವಾಗಿ ಪರಿವರ್ತನೆಯಾಗುತ್ತಿದ್ದಾರೆ. ಇದರ ವಿರುದ್ಧ ಅಹಿಂಸಾತ್ಮಕ ಹೋರಾಟದ ಮೌನ ಕ್ರಾಂತಿ ಗ್ರಾಮೀಣ ಮಟ್ಟದಿಂದಲೇ ಆರಂಭವಾಗ ಬೇಕಾದುದು ಇಂದಿನ ಆಗತ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ ಹೇಳಿದರು.

ಅವರು ನೀರೆ ಕಣಂಜಾರು ಗ್ರಾಮೀಣ ಕೃಷಿ ಘಟಕ ಅಧ್ಯಕ್ಷ ಅಂತೋಣಿ ಡಿ’ಸೋಜರವರ ಉಸ್ತುವಾರಿಯಲ್ಲಿ ನಡೆದ ಸ್ಥಳೀಯ ಕಾಂಗ್ರೆಸ್ ಗ್ರಾಮ ಸಮಿತಿ ಕಾರ್ಯಕರ್ತರ ವಿಶೇಷ ಸಮಾವೇಶದಲ್ಲಿ ಮಾತಾಡಿದರು.

ಡಿಸಿಸಿ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿ,ಆಡಳಿತಾರೂಢ ಬಿಜೆಪಿಯ ವ್ಯರ್ಥ ಆಮಿಷಗಳಿಗೆ ಬಲಿಯಾಗದೆ ಈ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳ ಮರು ಹುಟ್ಟಿನ ಹಬ್ಬವನ್ನು ಆಚರಿಸುವಂತಾಗಬೇಕು ಎಂದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಸದಾಶಿವ ದೇವಾಡಿಗ ಅಧ್ಯಕ್ಷತೆ ವಹಿಸಿ ಮಾತಾಡಿ ಪಕ್ಷ ಸಂಘಟನೆಗೆ ಕರೆ ನೀಡಿದರು. ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ,  ವಾರ್ಡ್ ಸಮಿತಿ ಅಧ್ಯಕ್ಷ ಅಂಬ್ರೋಜ್ ಲೋಬೋ ಸಂದರ್ಭೋಚಿತವಾಗಿ ಮಾತಾಡಿದರು

ಕೆಪಿಸಿಸಿ ಕೃಷಿ ಸಮಿತಿಯ ರಾಜ್ಯ ಕಾರ್ಯದರ್ಶಿ ಉದಯ ವಿ. ಶೆಟ್ಟಿ, ಹಿರಿಯ ಕಾಂಗ್ರೆಸ್ ಮುಂದಾಳು ಎರ್ಲಪಾಡಿ ಪಂಚಾಯಿತಿ ಮಾಜಿ ಅಧ್ಯಕ್ಷ ಭೋಜ ಶೆಟ್ಟಿ, ಧರ್ಮರಾಜ ಕುಮಾರ್, ಎಪಿಎಂಸಿ ಸದಸ್ಯ ಜಯರಾಮ ಆಚಾರ್ಯ, ಸ್ಥಳೀಯ  ಗ್ರಾಮ ಸಮಿತಿ ಅಧ್ಯಕ್ಷ ಕಿಶೋರ್ ಮಡಿವಾಳ, ನೀರೆ ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ಆಚಾರ್ಯ,ಬ್ಲಾಕ್ ಕೃಷಿ ಸಮಿತಿ ಉಪಾಧ್ಯಕ್ಷ ಆಂತೋನಿ ಮಚಾದೋ, ಕಾರ್ಕಳ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷ ಸತೀಶ್ ದೇವಾಡಿಗ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಯುವ ನಾಯಕ ಪ್ರಕಾಶ್ ಮಾರ್ಟಿಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಬ್ಲಾಕ್ ಕಿಸಾನ್ ಘಟಕದ ಕಾರ್ಯದರ್ಶಿ  ಸುಜಾತ ಶೆಟ್ಟಿ ವಂದಿಸಿದರು.

              

  ‌‌ ‌‌‌‌‌‌‌‌‌‌‌    

  ‌‌

ಇತ್ತೀಚಿನ ಸುದ್ದಿ

ಜಾಹೀರಾತು