6:38 AM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

ಮಡಿಕೇರಿ: ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ಯತ್ನ; ಹಿಂದೂ ಸಂಘಟನೆಯ ಮುಖಂಡರು ಪೊಲೀಸ್ ವಶಕ್ಕೆ

10/11/2021, 20:27

ಮಡಿಕೇರಿ(reporterkarnataka.com):
ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲುದ್ದೇಶಿಸಿದ್ದ ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಸೇರಿದಂತೆ ಹಲವು ಪ್ರಮುಖರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.

2015ರಲ್ಲಿ ಟಿಪ್ಪು ಜಯಂತಿ ಸಂದರ್ಭ ನಡೆದ ಅಹಿತಕರ ಘಟನೆಯಲ್ಲಿ ಮೃತಪಟ್ಟ ಕುಟ್ಟಪ್ಪ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣ ವೇದಿಕೆ ಬುಧವಾರ ಬೆಳಗ್ಗೆ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಾಂತಿ ಪೂಜೆ ಸಲ್ಲಿಸಿ ಹೊರಬರುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್ ನ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ ಹಾಗೂ ಹಿಂದೂ ಜಾಗರಣ ವೇದಿಕೆಯ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದರು.

ಸಂಘ ಪರಿವಾರದ ಸಂಘಟನೆಗಳು ಜನಜಾಗೃತಿ ಸಭೆ, ಮೆರವಣಿಗೆ ಆಯೋಜಿಸಲುದ್ದೇಶಿಸಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ವಿಹಿಂಪ ಮತ್ತು ಹಿಂಜಾವೇ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೊಡಗು ಜಿಲ್ಲಾದ್ಯಂತ ಇಂದು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು