10:07 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಮೆಣಸಿನ ಕಾಯಿ ಸಸಿಗೆ ಸಿಂಪಡಿಸುವ ಎಣ್ಣೆಯಲ್ಲಿ ಮೋಸ: ಮಾನ್ವಿ ಸಹಾಯಕ ಕೃಷಿ ನಿರ್ದೇಶಕರಿಗೆ ರೈತ ಸಂಘ ದೂರು

10/11/2021, 15:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು,
info.reporterkarnataka@gmail.com

ಜಿಲ್ಲೆಯ ಸಿರಿವಾರ ತಾಲೂಕಿನ ಪಟಕನದೊಡ್ಡಿ ಗ್ರಾಮದ ರೈತ ಮಾನ್ವಿಯ ವೆಂಟಕ ಸಾಯಿ ಟೆಂಡರ್ಸ್ ಎಂಬ ಅಂಗಡಿಯಿಂದ ಖರೀದಿಸಿದ
ಮೆಣಸಿನಕಾಯಿ ಸಸಿಗೆ ಸಿಂಪಣಿ ಮಾಡುವ ಎಣ್ಣಿಯಿಂದ ಎರಡೇ ದಿನಗಳಲ್ಲಿ ಮೆಣಸಿನ ಸಸಿ ಸಂಪೂರ್ಣ ಸುಟ್ಟು ಹೋಗಿದ್ದು, ರೈತ ಕಂಗಾಲಾಗಿದ್ದಾರೆ.

ಈ ವಿಷಯವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ರೂಪ ಶ್ರೀನಿವಾಸ್ ನಾಯಕ್ ಅವರಿಗೆ ತಿಳಿಸಿದ್ದು, ಅವರು

ಬುಧವಾರ ಮಾನ್ವಿ ಸಹಾಯಕ ಕೃಷಿ ನಿರ್ದೇಶಕ ಕಾರ್ಯಾಲಯಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ನಂತರ ಅಧಿಕಾರಿಗಳು ಟ್ರೇಡರ್ಸ ಅಂಗಡಿ ಮಾಲೀಕ ಮಾರುವ ಎಣ್ಣೆ ಹೆಸರು (Foshion power & stany microFood) ತಕ್ಷಣ ರದ್ದುಪಡಿಸಿದ್ದಾರೆ. 

ಅಂಗಡಿಯಲ್ಲಿ ಮಾರಾಟ ಮಾಡುವ ಎಲ್ಲ ವಸ್ತುಗಳ ಪರಿಶೀಲನೆ ನಡೆಸಬೇಕು, ಅಂಗಡಿಯ ಪರವಾನಗಿ ರದ್ದುಪಡಿಸಬೇಕು ಮತ್ತು ಸಂತ್ರಸ್ತ ರೈತನಿಗೆ ಪರಿಹಾರ ನೀಡಬೇಕೆಂದು ರೂಪಾ ಶ್ರೀನಿವಾಸ ನಾಯಕ್ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್, ಮಾನ್ವಿ ತಾಲೂಕು ಅಧ್ಯಕ್ಷ ಬಸವರಾಜ್, ಸಿರಿವಾರ ತಾಲೂಕು ಅಧ್ಯಕ್ಷ ನಾಗರಾಜ್, ಮರಿಲಿಂಗ ಪಾಟೀಲ್, ಉಪಾಧ್ಯಕ್ಷರಾದ ವಿರೇಶ್, ಶಾಮು, ಇನ್ನು ಇತರ ರೈತ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು