7:12 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ದೇವರ ತೋಟದ ಸುಂದರ ಕುಸುಮಗಳು: ಮಕ್ಕಳ ಪ್ರಗತಿಯ ಬಗ್ಗೆ ನಮಗೆ ಬದ್ಧತೆ ಇರಲಿ

13/11/2021, 23:51

ಇಂದಿನ ಮಕ್ಕಳೇ ಮುಂದಿನ ಭಾವಿ ಪ್ರಜೆಗಳು.ಮಕ್ಕಳ ಸರ್ವತೋಮುಖ ಅಭಿವೃದ್ಧಿ ನಮ್ಮೆಲ್ಲರ ಕರ್ತವ್ಯ ಜವಾಬ್ದಾರಿ. ಇದಕ್ಕಾಗಿ ಮಕ್ಕಳಲ್ಲಿ ಯಾವ ಸಂಸ್ಕಾರಗಳನ್ನು ಬೆಳೆಸುತ್ತೇವೆ ಅದೇ ರೀತಿ ನಾಳಿನ ಭವಿಷ್ಯ ರೂಪುಗೊಳ್ಳುತ್ತದೆ.
ಶಾಲೆಗಳಲ್ಲಂತೂ  ಈ ದಿನವೂ ಸಂಭ್ರಮವೋ ಸಂಭ್ರಮ ಹೊಸಬಟ್ಟೆ ತೊಟ್ಟು ಹರುಷದಿಂದ ನೋಡುವುದೇ ಸಂಭ್ರಮ. ನಾನು ಶಿಕ್ಷಕಿಯಾಗಿ, ಅದರಲ್ಲೂ ಪ್ರಾಥಮಿಕ ಶಿಕ್ಷಕಿ ಯಾಗಿರುವುದು ಭಾಗ್ಯವೇ ಸರಿ. 

ಮಗು ಮನೆಯಲ್ಲಿನ ಮೊದಲ ಹೂವನ್ನು ನನಗೆ ತಂದು ನೀಡಿದಾಗ ಆ ಮುಖದಲ್ಲಿನ  ಸಂತೋಷ ನನ್ನ ಶಿಕ್ಷಕ ವೃತ್ತಿಗೆ ಸಾರ್ಥಕತೆ ತಂದುಕೊಟ್ಟಿತು.

18-20 ವರ್ಷಗಳ ಮೊದಲು ಶಾಲೆಯಲ್ಲಿ ನನ್ನಿಂದ ಕೈತುತ್ತು  ಉಂಡ ಮಗು ಬಹು ವರ್ಷಗಳ ನಂತರ ಸಿಕ್ಕಾಗ ನನ್ನನ್ನು ಪರಿಚಯಿಸಿದ ರೀತಿ ಇವರು “ನನ್ನ ಟೀಚರ್ ಅಲ್ಲ.  ನನ್ನ ಅಮ್ಮ” ಎಂದಾಗ ಕಣ್ಣಲ್ಲಿ ಆನಂದಭಾಷ್ಪ. 

ಮಕ್ಕಳು ದೇವರ ತೋಟದ ಸುಂದರ ಕುಸುಮಗಳು. ಒಂದೊಂದು ವಿಭಿನ್ನ ಸುಂದರ ಆಕರ್ಷಕ.ಮಕ್ಕಳ ಸರ್ವಾಂಗೀಣ ಪ್ರಗತಿ ಕೇವಲ ಶಿಕ್ಷಕರ, ಹೆತ್ತವರ ಜವಾಬ್ದಾರಿ ಆಗಿರದೆ ಸಮಾಜದ ಜವಾಬ್ದಾರಿಯೂ ಹೌದು.

ಎಳವೆಯಲ್ಲಿಯೇ ಮಗುವಿಗೆ ಮೌಲ್ಯಗಳ ಅರಿವು ಶಿಸ್ತು,ಸಂಯಮಗಳನ್ನು ಕಲಿಸಿ ಬೆಳೆಸಬೇಕು ಇದರ ಜೊತೆಗೆ  ಒಂದು ಸಂಗತಿ ನೆನಪಿಡಬೇಕಾಗಿದೆ. ಮಗು ಎದುರಿಗಿದ್ದವರನ್ನು ನೋಡಿಯೇ ಅನುಸರಿಸಿ ಕಲಿಯುತ್ತದೆ. ಹಾಗಾಗಿ ಹಿರಿಯರಾದ ನಮ್ಮ ಜವಾಬ್ದಾರಿ ತುಂಬಾ ಹಿರಿದು.

ಮಗುವಿಗೆ ಆದರ್ಶವಾಗಿ ಮೌಲ್ಯಗಳನ್ನು ಅನುಸರಿಸಿ ನಾವು ಸಾಗಿದ್ದೆ ಆದರೆ ಮಗು ನಮ್ಮನ್ನು ಅನುಸರಿಸಬಹುದು. ಇಂದಿನ ಈ ಪುಟ್ಟ ಮಕ್ಕಳು ಮುಂದಿನ ದೇಶದ ಭವಿಷ್ಯದ ಪ್ರಜೆಗಳು ಭಾರತದ ನಿರ್ಮಾಣಕಾರರು. ಮಗುವಿನ ಮನಸ್ಸು ಮಣ್ಣಿನ ಮುದ್ದೆಯಂತೆ. ಅದಕ್ಕಾಗಿ ಕುಂಬಾರಿಕೆಯ ಕೆಲಸ ನಾವು ಮಾಡಬೇಕಾಗಿದೆ.

ಒಳಿತು ಕೆಡುಕುಗಳ ತಿಳುವಳಿಕೆ ಮತ್ತು ಮಣ್ಣಿನಿಂದ ಸುಂದರ ಕಲಾಕೃತಿಗಳ ನಿರ್ಮಾಣ ನಮ್ಮ ಜವಾಬ್ದಾರಕುಗಳ ತಿಳುವಳಿಕೆ  ಇತ್ತು. ಮಣ್ಣಿನಿಂದ ಸುಂದರ ಕಲಾಕೃತಿಗಳ ನಿರ್ಮಾಣ ನಮ್ಮ ಜವಾಬ್ದಾರಿ. 

ಒಟ್ಟಿನಲ್ಲಿ ಮಕ್ಕಳ ದಿನಾಚರಣೆ ಪರ್ವಕಾಲದಲ್ಲಿ ಮಕ್ಕಳ ಪ್ರಗತಿಯ ಬಗ್ಗೆ ನಮ್ಮ ಬದ್ಧತೆಯನ್ನು ನವೀಕರಿಸಲು ಸಕಾಲ ನಮ್ಮ ಭವ್ಯ ಭಾರತ ಮುಂದಿನ ಭವ್ಯ ಪ್ರಜೆಗಳಿಂದ ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂಬುದೇ ನನ್ನ ಆಶಯ.

✍️

ಇತ್ತೀಚಿನ ಸುದ್ದಿ

ಜಾಹೀರಾತು