4:07 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್…

ಇತ್ತೀಚಿನ ಸುದ್ದಿ

ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ವಿರೋಧಿ ಅಲ್ಲ; ದಲಿತರ ಪರ ಅತೀ ಹೆಚ್ಚು ಕೆಲಸ ಮಾಡಿದವರು: ಕೃಷ್ಣ ಡಿ.ಚಿಗರಿ

13/11/2021, 09:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ದಲಿತ ಸಮುದಾಯಕ್ಕೆ ಸೇರಿದ್ದರೂ ದಲಿತರ ನ್ಯಾಯಬದ್ಧ ಅವಕಾಶಗಳನ್ನು ಕಿತ್ತುಕೊಳ್ಳುತ್ತಿರುವ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನ್ನು ತಿರುಚಿ ಅಪಪ್ರಚಾರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಸಂಗತಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಹೇಳಿದರು.

ಅಧಿಕಾರ ಸಿಕ್ಕಾಗ ದಲಿತರ ಪರವಾಗಿ ಅತಿ ಹೆಚ್ಚಿನ ಕೆಲಸ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಬ್ಬ ನಿಜವಾದ ಅಂಬೇಡ್ಕರ್ ವಾದಿ. ದಲಿತರಿಗೆ SCP/STP ಕಾಯ್ದೆ, ಜಾರಿಗೊಳಿಸಿ, ಗುತ್ತಿಗೆ ಮೀಸಲಾತಿ ಅವಕಾಶ ಕಲ್ಪಿಸಿ, ಬಡ್ತಿ ಮೀಸಲಾತಿ ಯೋಜನೆ ರೂಪಿಸಿ, ಕಲ್ಲು ಗಣಿಗಾರಿಕೆಯಲ್ಲಿ ಮೀಸಲಾತಿ, ಕೈಗಾರಿಕೆಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ ಸಿದ್ದರಾಮಯ್ಯ ಅವರು SCP/STP ಕಾಯ್ದೆಯಡಿ 30 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ನಿಗದಿಗೊಳಿಸಿದರು ಎಂದರು.

ಬಹುಶಃ ಈಗ ದೊಡ್ಡದಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಯಾವ ನಾಯಕರೂ ಕೂಡಾ ಸಿದ್ದರಾಮಯ್ಯನವರ ರೀತಿ ತಮ್ಮ ರಾಜಕೀಯ ಇತಿಹಾಸದಲ್ಲಿ ದಲಿತರ ಪರವಾದ ಕಾರ್ಯಕ್ರಮ ರೂಪಿಸುವುದಿರಲಿ, ಅವರಂತೆ ಯೋಚಿಸಲೂ ಕೂಡಾ ಸಾಧ್ಯವಿಲ್ಲ.ಅಂಬೇಡ್ಕರ್ ಸಿದ್ದಾಂತವನ್ನು ತಮ್ಮಬದುಕಲ್ಲೇ ಅಳವಡಿಸಿಕೊಂಡಿರುವ ಸಿದ್ದರಾಮಯ್ಯ ಅವರು ಎಂದಿಗೂ ದಲಿತರ ವಿರುದ್ಧವಾಗಿ ಹಗುರವಾಗಿ ಹಿಂದೆಯೂ ಮಾತನಾಡಿಲ್ಲ, ಇಂದೂ ಮಾತಾಡಿಲ್ಲ ಮುಂದೆಯೂ ಮಾತನಾಡಲ್ಲ ಎಂದು ಅವರು ನುಡಿದರು.

ದಲಿತರ ಹಿತಾಸಕ್ತಿ ಕಾಪಾಡುವ ಜಾಗದಲ್ಲಿ ದಲಿತರ ಅವಕಾಶಗಳನ್ನು ತಪ್ಪಿಸುತ್ತಿರುವ ಬಿಜೆಪಿಯ ದಲಿತ ನಾಯಕರು ತಮ್ಮ ಸುಳ್ಳು ಪ್ರಚಾರಕ್ಕೆ ಮತ್ತು ದಲಿತ ವಿರೋಧಿ ನೀತಿಗಳಿಗಾಗಿ ರಾಜ್ಯದ ಜನತೆಯ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಈ ಮೂಲಕ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು