1:24 PM Wednesday24 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ…

ಇತ್ತೀಚಿನ ಸುದ್ದಿ

ಮಾರ್ಗನ್ಸ್ ಗೇಟ್ : ರಾಮಕ್ಷತ್ರೀಯ ಸಂಘದಿಂದ ನಾಳೆ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

13/11/2021, 20:18

ಮಂಗಳೂರು(reporterkarnataka.com): ಮಂಗಳೂರು ರಾಮಕ್ಷತ್ರೀಯ ಸೇವಾ ಸಂಘ, ರಾಮಕ್ಷತ್ರೀಯ ಯುವ ವೃಂದ ಮತ್ತು ಮಹಿಳಾ ವೃಂದ, ಭಕ್ತವೃಂದ ಗುರುಪರಾಶಕ್ತಿ ಮಠ ಮರಕಡ ಮತ್ತು ಮಂಗಳೂರು ಲಯನ್ಸ್ ಕ್ಲಬ್ ಮಿಲಾಗ್ರೀಸ್, ಶ್ರೀ ಲಕ್ಷ್ಮ ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಬೃಹತ್ ಕಣ್ಣಿನ ಹಾಗೂ ದಂತ ಚಿಕಿತ್ಸಾ ಶಿಬಿರ ನಗರದ ಜಪ್ಪು ಮಾರ್ಗನ್ಸ್ ಗೇಟಿನ ರಾಮಕ್ಷತ್ರೀಯ ಮಂದಿರದಲ್ಲಿ ನವೆಂಬರ್ 14ರಂದು ಬೆಳಗ್ಗೆ 9.30ರಿಂದ 12.30ರ ತನಕ ನಡೆಯಲಿದೆ.

ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರು ಶಿಬಿರವನ್ನು ಉದ್ಘಾಟಿಸುವರು. ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಕೆ. ರವೀಂದ್ರ ಅಧ್ಯಕ್ಷತೆ ವಹಿಸುವರು.  ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನ ಮುಖ್ಯಸ್ಥ ಡಾ. ಜಯರಾಮ ಶೆಟ್ಟಿ, ಕೆಎಂಸಿ ಬ್ಲಡ್‌ ಬ್ಯಾಂಕಿನ ನಿರ್ದೇಶಕರಾದ ಡಾ. ದೀಪಾ ಅಡಿಗ, ಅರಣ್ಯ ಇಲಾಖೆ

ಕರಾವಳಿ ವಲಯ ನಿಯಂತ್ರಣಾಧಿಕಾರಿ ಶ್ರೀಧರ ಪಿ., ಮಂಗಳೂರು ಉತ್ತರ ಠಾಣೆ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು, ಲಯನ್ಸ್ ಕ್ಲಬ್ ಮಂಗಳೂರು ಮಿಲಾಗ್ರೀಸ್ ಅಧ್ಯಕ್ಷ ತುಲಾರ್ ರೈ 

ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಶಿಬಿರದಲ್ಲಿ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ್ಕ ವಿತರಣೆ ಮತ್ತು ದಂತ ಚಿಕಿತ್ಸೆ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು