3:42 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಮಂಗಳೂರು: ಲಾರಿಯಿಂದ ಗ್ರಾನೈಟ್ ತಲೆ ಮೇಲೆ ಬಿದ್ದು ಯುವಕ ಸಾವು; ದುರ್ಘಟನೆಗೆ ಕಾರಣ ಏನು?

14/11/2021, 12:06

ಮಂಗಳೂರು(reporterkarnataka.com): ಗ್ರಾನೈಟ್ ತುಂಬಿದ ಲಾರಿಯ ಪೋಟೋ ತೆಗೆಯಲು ಹೋಗಿದ್ದ ಸಂದರ್ಭದಲ್ಲಿ ಯುವಕನ ಮೇಲೆ ಗ್ರಾನೈಟ್ ಬಿದ್ದು ಮೃತಪಟ್ಟ ಘಟನೆ ನಗರದ ಅತ್ತಾವರ ಬಳಿ ನಡೆದಿದೆ. 

ಮೃತರನ್ನು ಜೆಪ್ಪು ನಿವಾಸಿ ಹಮೀದ್ ಎಂಬವರ ಪುತ್ರ ಅಬ್ದುರ್ರಹ್ಮಾನ್ ರಿಲ್ವಾನ್(30)  ಎಂದು ಗುರುತಿಸಲಾಗಿದೆ.

ರಾಜಸ್ಥಾನದಿಂದ ಗ್ರಾನೈಟ್ ತುಂಬಿಕೊಂಡು ಬಂದಿದ್ದ ಲಾರಿಯೊಂದು ಅತ್ತಾವರ ಬಳಿಯ ಕಟ್ಟಡ ನಿರ್ಮಾಣವಾಗುತ್ತಿದ್ದ ಸ್ಥಳಕ್ಕೆ  ಬಂದಿತ್ತು. ಈ ವೇಳೆ ಕಟ್ಟಡದ ರೈಟರ್ ಆಗಿದ್ದ ರಿಲ್ವಾನ್ ರಲ್ಲಿ ಗ್ರಾನೈಟ್‌ನ ಫೋಟೊ ತೆಗೆಯಲು ಕಟ್ಟಡದ ಸೂಪರ್ ವೈಸರ್ ಸೂಚಿಸಿದ್ದರು. ಅದರಂತೆ ಫೋಟೊ ತೆಗೆಯಲು ಅವರು ಲಾರಿಯ ಹಿಂಬದಿಗೆ ತೆರಳಿದ್ದರೆನ್ನಲಾಗಿದೆ. ಈ ವೇಳೆ ಲಾರಿಯಲ್ಲಿದ್ದ ಗ್ರಾನೈಟ್ ಏಕಾಏಕಿ ರಿಲ್ವಾನ್ರ ಮೈಮೇಲೆ ಬಿದ್ದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು