3:41 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ 

15/11/2021, 10:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. 

ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರುವಾಗ ಕಾಫಿನಾಡಿನ ಬೆಟ್ಟಗುಡ್ಡಗಳ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುತ್ತಾ ಬಂದರು. ಮಧ್ಯಾಹ್ನ ಮೂಡಿಗೆರೆ ಪಟ್ಟಣಕ್ಕೆ ಆಗಮಿಸಿ ಶತಮಾನದಷ್ಟು ಹಳೆಯ ಮನೆಯಲ್ಲಿ ಪ್ರಾರಂಭಿಸಲಾಗಿರುವ ಖಲೀಲ್ಸ್ ಕಿಚನ್ಸ್ ಹೊಟೇಲಿಗೆ ಭೇಟಿ ನೀಡಿ ಭೋಜನ ಸವಿದರು. ಮಲೆನಾಡು-ಕರಾವಳಿ ಭಾಗದ ವಿಶೇಷ ಖಾದ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಲೆಗೆ ಶ್ವೇತವಸ್ತ್ರ ಕಟ್ಟಿಕೊಂಡಿದ್ದ ಟೆನಿಸ್ ಕೃಷ್ಣ ವಿಶೇಷವಾಗಿ ಎಲ್ಲರ ಗಮನ ಸೆಳೆದರು.  

ಟೆನಿಸ್ ಕೃಷ್ಣ ಹಿಂದೆ ಚಿತ್ರರಂಗದ ದೊಡ್ಡ ಸ್ಟಾರ್ ನಟರಾಗಿದ್ದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಸಹಿತ ಹಲವಾರು ನಟರ ಜೊತೆ ಹಾಸ್ಯ ನಟನಾಗಿ ಅಭಿನಯಿಸಿ ಕನ್ನಡಿಗರಿಗೆ ಚಿರಪರಿಚಿತರಾದವರು.

ಇತ್ತೀಚಿನ ಸುದ್ದಿ

ಜಾಹೀರಾತು