5:01 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಉಡುಪಿ: ಬೀಗ ಮುರಿದು ಕಳ್ಳತನ; ಚಿನ್ನಾಭರಣ ಸಹಿತ ಒಟ್ಟು 3.70 ಲಕ್ಷ ರೂ. ಮೌಲ್ಯದ ಸೊತ್ತು ಕಳ್ಳರ ಪಾಲು

17/11/2021, 21:01

ಉಡುಪಿ(reporterkarnataka.com):  ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು‌ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಬಳಿ‌ ಬಾಬು ಆಚಾರ್ಯ ಎಂಬವರ ಮನೆಯಲ್ಲಿ‌ ನಡೆದಿದೆ.

ಮಂಗಳವಾರ ರಾತ್ರಿ 7ರಿಂದ ಬುಧವಾರ ಬೆಳಗ್ಗೆ 5.30ರ ಮಧ್ಯೆ ಯಾರೋ ಕಳ್ಳರು ಬಾಬು ಆಚಾರ್ಯರ ಮನೆಯ ಬಾಗಿಲು‌ ಮರಿದು ಒಳನುಗ್ಗಿದ್ದಾರೆ. ಬಳಿಕ ಕಪಾಟಿನಲ್ಲಿದ್ದ ಬೀಗದಿಂದ ಲಾಕರ್‌ತೆಗೆದು ಅದರಲ್ಲಿದ್ದ 12 ಗ್ರಾಂ ತೂಕದ ಚಿನ್ನದ ತೆಂಡುಲ್ಕರ್‌ಚೈನ್‌, 3 ಗ್ರಾಂ ತೂಕದ ಚಿನ್ನದ ಪವಿತ್ರ ಉಂಗುರ-1, 24 ಗ್ರಾಂ ತೂಕದ ಕಾಶಿತಾಳಿ ಸರ-1, 22 ಗ್ರಾಂ ತೂಕದ ಪೆಂಡೆಂಟ್‌ಇರುವ ಮುತ್ತಿನ ಸರ-1, 26 ಗ್ರಾಂ ತೂಕದ ಚಿನ್ನದ ಬಳೆಗಳು-2, 3 ಗ್ರಾಂ ತೂಕದ ಚಿನ್ನದ ಉಂಗುರ-1 ಸಹಿತ ಒಟ್ಟು 90 ಗ್ರಾಂ ತೂಕದ ₹ 3,60,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು‌ ಮಾಡಿದ್ದಾರೆ.

ಅಲ್ಲದೆ, ಬೆಳ್ಳಿ ಹರಿವಾಣ-1, ಬೆಳ್ಳಿ ತೋಟ-1, ಬೆಳ್ಳಿ ಕವಳಿಕೆ ಸೌಟು-1 ಒಟ್ಟು ರೂ. 10,000 ಮೌಲ್ಯದ ಬೆಳ್ಳಿ ಸಾಮಾಗ್ರಿಗಳು ಜೊತೆಗೆ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಮತ್ತು ಪಿರ್ಯಾದುದಾರರ ಅಣ್ಣನ ಜಾಗದ ಮೂಲ ದಾಖಲೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಒಟ್ಟು ಮೌಲ್ಯ 3,70,400 ಮೌಲ್ಯದ ಸೊತ್ತುಗಳನ್ನು‌ ಕಳ್ಳರು ಕಳವು ಮಾಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು