11:27 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಪ್ರಾಥಮಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುಗಮ: ಸ್ಥಳದಲ್ಲೇ ಆದೇಶಪತ್ರ ವಿತರಿಸಿದ ಡಿಡಿಪಿಐ 

21/11/2021, 09:59

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಡಿಡಿಪಿಐ ಕಚೇರಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆದಿದೆ.

ಪ್ರಕ್ರಿಯೆಯಲ್ಲಿ 10 ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡಿಪಿಐ ರೇವಣಸಿದ್ದಪ್ಪ ವರ್ಗಾವಣೆ ಆದೇಶ ವಿತರಿಸಿದರು. ಜಿಲ್ಲೆಯಲ್ಲಿ ಪಾಥಮಿಕ ಶಾಲಾ ವಿಭಾಗದಿಂದ 20 ಮಂದಿ ಪರಸ್ಪರ ವರ್ಗಾವಣೆಗೆ ಅರ್ಜಿ ಹಾಕಿದ್ದು , 12 ಮಂದಿ ಹಾಜರಾಗಿದ್ದರು ಮತ್ತು 10 ಮಂದಿ ವರ್ಗಾವಣೆ ಆದೇಶ ಪಡೆದುಕೊಂಡರು. ವಿಕಲಚೇತನರೊಬ್ಬರು ಸ್ಥಳ ಆಯ್ಕೆ ಮಾಡಿಕೊಂಡಿದ್ದು , ಡಿಡಿಪಿಐ ರೇವಣಸಿದ್ದಪ್ಪ , ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್.ಅಶೋಕ್ ಅವರಿದ್ದ ಸ್ಥಳಕ್ಕೆ ಹೋಗಿ ಆದೇಶ ವಿತರಿಸಿದರು . 

ಡಿಡಿಪಿಐ ರೇವಣ ಸಿದ್ದಪ್ಪ ಈ ಸಂದರ್ಭದಲ್ಲಿ ಮಾತನಾಡಿ , ವರ್ಗಾವಣೆಯಾಗಿರುವ ಶಿಕ್ಷಕರು ಸಮಯಪಜ್ಜೆಯಿಂದ ವರ್ತಿಸಿ , ಸಕಾಲಕ್ಕೆ ಹೋಗಿ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದರು . 

ವರ್ಗಾವಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು , ಶಿಕ್ಷಕರನ್ನು ಅಲೆಸದೇ ಸ್ಥಳದಲ್ಲೇ ವರ್ಗಾವಣೆ ಆದೇಶ ಪತ ವಿತರಿಸಲಾಗಿದೆ ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್‌.ಅಶೋಕ್‌ , ಪಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪಧಾನ ಕಾರ್ಯದರ್ಶಿ ಎಂ.ನಾಗರಾಜ್ ಎಷಯ ಪರಿವೀಕ್ಷಕ ಕೃಷ್ಣಪ್ಪ , ಅಧೀಕ್ಷಕರಾದ ಮಂಜುನಾಥರೆಡ್ಡಿ ಗೋವಿಂದಗೌಡ , ಸಿಬ್ಬಂದಿ ಚಿರಂಜೀವಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು