7:34 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ಗುರುಪುರ ಕೈಕಂಬ: ಇಂದಿನಿಂದ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ; ಸಮಾರೋಪಕ್ಕೆ ಮಾಜಿ ಸಚಿವೆ ಶೈಲಜಾ ಟೀಚರ್

22/11/2021, 09:33

ಮಂಗಳೂರು(reporterkarnataka.com): ಸಿಪಿಎಂ ಪಕ್ಷದ ಎರಡು ದಿನಗಳ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವಂಬರ್ 22, 23 ರಂದು ಗುರುಪುರ ಕೈಕಂಬದ ಪ್ರಿಮೀಯರ್ ಸಭಾಂಗಣದ ವೇದಿಕೆಯಲ್ಲಿ ನಡೆಯಲಿದೆ.

ಪ್ರಸಕ್ತ ರಾಜಕೀಯ, ಸಾಮಾಜಿಕ ವಿದ್ಯಮಾನ, ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮ್ಮೇಳನ ಚರ್ಚಿಸಲಿದೆ. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಗಳು ಹೆಚ್ಚು ಹೆಚ್ಚು ವ್ಯಾಪಾರೀಕರಣ ಗೊಳ್ಳುತ್ತಿರುವುರಿಂದ ಉಂಟಾಗಿರುವ ಬಿಕ್ಕಟ್ಟು, ಆಳಗೊಳ್ಳುತ್ತಿರುವ ರೈತ, ಕಾರ್ಮಿಕರ ಬವಣೆಗಳು, ತೀವ್ರಗೊಳ್ಳುತ್ತಿರುವ ನಿರುದ್ಯೋಗದ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದೆ ನಡೆಸಬೇಕಾಗಿರುವ ಹೋರಾಟಗಳ ರೂಪುರೇಷೆಗಳ ಕುರಿತಾದ ನಿರ್ಣಯಗಳು ಸಮ್ಮೇಳನದಲ್ಲಿ ಚರ್ಚೆಗೊಳಗಾಗಲಿವೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಯ್ಕೆಯಾದ 180 ಸಂಗಾತಿಗಳು ಪ್ರತಿನಿಧಿಗಳಾಗಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 

ನವಂಬರ್ 22 ರ ಬೆಳಿಗ್ಗೆ 10. 30ಕ್ಕೆ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜು ಸಮ್ಮೇಳನ

ಉದ್ಘಾಟಿಸಲಿದ್ದಾರೆ‌. ಹಿರಿಯ ಕಾರ್ಮಿಕ ನಾಯಕ ಯು. ಬಿ. ಲೋಕಯ್ಯ ಧ್ವಜಾರೋಹಣದ ಮೂಲಕ ಸಮ್ಮೇಳನದ ಪ್ರಕ್ರಿಯೆಗಳಿಗೆ ಚಾಲನೆ ನೀಡಲಿದ್ದಾರೆ. ನವಂಬರ್ 23 ರ ಸಂಜೆ 3. 00 ಗಂಟೆಗೆ ಪೊಳಲಿ ದ್ವಾರದ ಬಳಿಯಿಂದ ಸಾವಿರಾರು ಕಾರ್ಯಕರ್ತರ ಬೃಹತ್ ಮೆರವಣಿಗೆ ನಡೆಯಲಿದ್ದು, 4 .00 ಗಂಟೆಗೆ ಕೈಕಂಬದ ಪ್ರಿಮೀಯರ್  ಮೈದಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. 

ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿರುವ ಕೇರಳದ ಮಾಜಿ ಆರೋಗ್ಯ ಸಚಿವೆ ಕೆ. ಕೆ .ಶೈಲಜಾ ಟೀಚರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸ್ವಾಗತ ಸಮಿತಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು