2:23 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಅಥಣಿ: ವಿಕಲಚೇತನರಿಗೆ ಕ್ರಿಕೆಟ್ ಕಿಟ್ ವಿತರಿಸಿದ ಡಾ. ಶಿವಬಸು ನಾಯಿಕ

23/11/2021, 19:59

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲ್ಲೂಕಿನ ಅವರಕೋಡ ಗ್ರಾಮದ ರಾಷ್ಟ್ರೋತ್ಥಾನ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಯಾದ ಡಾ. ಶಿವಬಸು ನಾಯಿಕ ಅವರು ವಿಕಲಚೇತನರಿಗೆ ಕ್ರಿಕೆಟ್ ಕಿಟ್ ವಿತರಣೆ ಮಾಡಿದರು.

ಡಾ.ಶಿವಬಸು ನಾಯಿಕ ಅವರು ವಿಕಲಚೇತನರ ಕುರಿತು ಇವರು ವಿಕಲಚೇತನರಲ್ಲ ಇವರು ವಿಶೇಷಚೇತನರು ಇವರಿಗೆ ಸ್ಪೂರ್ತಿ ನೀಡುವುದು ನಮ್ಮ ಕರ್ತವ್ಯ. ಒಬ್ಬ ವ್ಯಕ್ತಿ ಸದೃಢತೆ ಇದ್ದರೂ ಕೂಡ ಯಾವುದೇ ಕೆಲಸ ಕಾರ್ಯಕ್ಕೆ ಮುಂದೆ ನುಗ್ಗಲ್ಲ. ಆದರೆ ಇವರು ವಿಕಲಚೇತನರಿದ್ದರೂ ಕೂಡಾ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ರಾಷ್ಟ್ರಮಟ್ಟದಲ್ಲಿ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಿ ಎಂದು ಶುಭ ಹಾರೈಸಿದರು.

ವಿಕಲಚೇತನರು ತಾಲೂಕ ಮಟ್ಟ, ಜಿಲ್ಲಾಮಟ್ಟದಲ್ಲಿ ಗೆಲುವು ಸಾಧಿಸಿ  ಈಗ ರಾಜ್ಯಮಟ್ಟದ ತ್ರಿಕೋನ ಪಂದ್ಯಾವಳಿಯಲ್ಲಿ ಇದೇ ತಿಂಗಳು ನವೆಂಬರ್ 28ರಂದು ತಮ್ಮದೇ ಆದ ಛಾಪು ಮೂಡಿಸಲಿದ್ದಾರೆ. ಇವರು ಕಲ್ಪನೆಗೂ ಮೀರಿದ ಕನಸು ಕಂಡು ನನಸು ಮಾಡಿಕೊಂಡ ಸರದಾರರು ಎಂದು ಹೇಳಿದರೆ ತಪ್ಪಾಗಲಾರದು.

ಎಲ್ಲ ವಿಕಲಚೇತನರು ತಮಗೆ ಕ್ರಿಕೆಟ್ ಕಿಟ್ ವಿತರಿಸಿದ ಡಾ. ಶಿವಬಸವ ನಾಯಯಿಕ ಇವರಿಗೆ ಸನ್ಮಾನಿಸಿದರು. ಶಿವ ಬಸು ನಾಯಿಕ ಇವರ ಬಗ್ಗೆ ಹೇಳುವುದಾದರೆ ಇವರು ಒಂದಿಲ್ಲೊಂದು ಸಮಾಜದ ಕಾರ್ಯದಲ್ಲಿ ಜನಸೇವೆಗೆ ಸದಾ ಸಿದ್ಧ  ಇವರು ಶಿಕ್ಷಣ ಪ್ರೇಮಿ, ಕ್ರೀಡಾ ಪ್ರೇಮಿ, ರೋಗಿಗಳ ಪಾಲಿನ ದೇವರು ಎಂದೇ ಹೆಸರಾದ ವ್ಯಕ್ತಿ. ವಿಕಲಚೇತನರ ಕುರಿತು ಹಲ್ಯಾಳ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮುದಕಣ್ಣ ಶೇಗುಣಸಿ, ಭಾರತೀಯ ಕಿಸಾನ್ ಸಂಘದ ಮುಖಂಡರಾದ ಭರಮಣ್ಣ ನಾಯಕ, ದಶರಥ ಗುರುಗಳು ಮತ್ತು ವಿಕಲಚೇತನರಿಬ್ಬರು ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು