9:22 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಮನೆ ಕುಸಿದು ಮೃತಪಟ್ಟ ಕುಟುಂಬಕ್ಕೆ ವಸತಿ ಯೊಂದಿಗೆ 10 ಲಕ್ಷ ಪರಿಹಾರ ನೀಡಿ: ಗುನ್ನಳ್ಳಿ ರಾಘವೇಂದ್ರ ಆಗ್ರಹ

25/11/2021, 17:32

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಬಡೇಲಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪಕ್ಕನಹಳ್ಳಿ ಗ್ರಾಮದಲ್ಲಿ, ಇತ್ತೀಚೆಗೆ ಮನೆ ಬಿದ್ದು ವೃದ್ಧೆ ಎಂ.ಬಿ.ಕೊಟ್ರಮ್ಮ ಮೃತಪಟ್ಟಿರುವ ಕುಟುಂಬವನ್ನು ಭೇಟಿಯಾದ ಸಿಐಟಿಯು ಕಾರ್ಯದರ್ಶಿ ಗುನ್ನಳ್ಳಿ ರಾಘವೇಂದ್ರ 

ವಸತಿ ಜತೆಗೆ 10 ಲಕ್ಷ ರೂ. ಪರಿಹಾರ ನೀಡುವಂತೆ ಆಗ್ರಹಿಸಿದರು.

ಸರ್ಕಾರ  ಶೀಘ್ರವೇ ಮೃತ ನಿರಾಶ್ರಿತ ಕುಟುಂಬಕ್ಕೆ ವಸತಿ ಕಲ್ಪಿಸಬೇಕು. 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಪ್ರತಿ ಗ್ರಾಮಗಳಲ್ಲಿ ಹತ್ತಾರು ನಿರಾಶ್ರಿತರಿದ್ದು ಅವರು ವಸತಿ ಹೊಂದಿಲ್ಲ. ಪ್ರತಿ ಗ್ರಾಮಗಳಲ್ಲಿ ಹತ್ತಾರು ನಿರಾಶ್ರಿತರು ಬೀಳುವಂತಹ ದುಸ್ಥಿತಿಯ ಮನೆಗಳಲ್ಲಿದ್ದಾರೆ. ತಾಲೂಕಿನಲ್ಲಿ ಸಾವಿರಾರು ಕುಟುಂಬಗಳು ನಿರಾಶ್ರಿತರು ಬೀಳುವಂತಹ ಶಿಥಿಲಾವಸ್ಥೆಯ ಮನೆಯಲ್ಲಿದ್ದಾರೆ. ಅವರ ಜೀವಕ್ಕೆ ಬೆಲೆ ಇಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ಸಂದರ್ಭದಲ್ಲಿ ಬೇಕಾಬಿಟ್ಟಿ ಆಶ್ವಾಸನೆಗಳನ್ನು ನೀಡೋ ಜನಪ್ರತಿನಿಧಿಗಳು, ಸಂಕಷ್ಟದಲ್ಲಿರುವ ಬೀದಿಗೆ ಬಂದಿರುವ ನಿರಾಶ್ರಿತರ ಹಾಗೂ ಬಡ ಕಾರ್ಮಿಕರ ಗೋಳು ಆಲಿಸುತ್ತಿಲ್ಲ ಎಂದು ದೂರಿದ್ದಾರೆ.

ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಕೂಡಲೇ ಮನೆಬಿದ್ದು ಮೃತಪಟ್ಟಿರುವ ಕುಟುಂಬಗಳಿಗೆ ಶೀಘ್ರವೇ ವಸತಿಯೊಂದಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ನಿರಾಶ್ರಿತ ಕುಟುಂಬಗಳಿಗೆ ಶೀಘ್ರವೇ  ವಸತಿಯೊಂದಿಗೆ ಯೋಗ್ಯ ಪರಿ ಮತ್ತು ಪರಿಹಾರ ಕಲ್ಪಿಸಬೇಕೆಂದು ರಾಘವೇಂದ್ರ ಒತ್ತಾಯಿಸಿದ್ದಾರೆ. 

ಈ ನಿಟ್ಟಿನಲ್ಲಿ ಶಾಸಕರು, ಸಂಸದರು ಮನಸ್ಸು ಮಾಡಬೇಕಿದೆ ಮತ್ತು ಶೀಘ್ರವೇ ನಿರಾಶ್ರಿತರಿಗೆ ಆಶ್ರಯ ಕಲ್ಪಿಸಬೇಕಿದೆ. ಸೂಕ್ತ ಪರಿಹಾರ ನೀಡಬೇಕಿದೆ ಅವರು ತಮ್ಮ ಕನಿಷ್ಠ ಜವಾಬ್ದಾರಿಯನ್ನ ಸಕಾಲಕ್ಕೆ ನಿರ್ವಹಿಸಬೇಕಿದೆ. ತಾಲೂಕಾಡಳಿತ, ಜಿಲ್ಲಾಡಳಿತ ಪ್ರಾಮಾಣಿಕವಾಗಿ ನೆರವು ಕಲ್ಪಿಸಬೇಕಿದೆ. ನಿರ್ಲಕ್ಷ್ಯ ತೋರಿದ್ದಲ್ಲಿ ಜನವಿರೋಧಿ ನೀತಿಯ ವಿರುದ್ಧ ಸಮಾನ ಮನಸ್ಕ ಸಂಘಟನೆಗಳು ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಸಹಯೋಗದಲ್ಲಿ ಬೀದಿಗಿಳಿದು ಹೋರಾಡಬೇಕಾಗುತ್ತದೆ. ನಮ್ಮದು ಪಕ್ಷಾತೀತ ಹೋರಾಟವಾಗಿದ್ದು, ಪಕ್ಷಾತೀತವಾಗಿ ಸಮಾನ ಮನಸ್ಕ ಜನಪ್ರತಿನಿಧಿಗಳ ಸಹಕಾರದಲ್ಲಿ ಹೋರಾಟ ಮಾಡಲಾಗುವುದು ಎಂದು ಅವರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. 

ವೃದ್ಧೆ ಮನೆ ಕುಸಿತಕ್ಕೆ ಬಲಿಯಾಗಿರುವುದು ಒಂದು ದುರಾದೃಷ್ಟ ಸಂಗತಿಯಾಗಿದ್ದು, ತುಪ್ಪಕ್ಕನಹಳ್ಳಿಯ ಕೊಟ್ರಮ್ಮಳು ಮೃತಪಟ್ಟಿರುವ  ಅನಾಹುತಕ್ಕೆ ಪ್ರಕೃತಿಯ ವೈಪರಿತ್ಯ ಕಾರಣವಾದರೂ, ಸ್ಥಳೀಯ ಆಡಳಿತ ಹಾಗೂ ತಾಲೂಕು ಆಡಳಿತದ ನಿರ್ಲಕ್ಷ್ಯ ಧೋರಣೆಯೂ ಪರೋಕ್ಷ ಕಾರಣ ಎಂದು ಅವರು ಕಿಡಿಕಾರಿದ್ದಾರೆ. 

ನಿರಾಶ್ರಿತರಿಗೆ ಆಶ್ರಯ ಕಲ್ಪಿಸದೇ ಸ್ಥಳೀಯ ಆಡಳಿತ ನಿರ್ಲಕ್ಷ್ಯ ತೋರಿದ್ದು,ಇಂತಹ ಕುಟುಂಬಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಈ ಅನಾವುತಕ್ಕೆ ಕಾರಣ ಎಂದು ರಾಘವೇಂದ್ರ ದೂರಿದ್ದಾರೆ. ಈ ಸಂದರ್ಭದಲ್ಲಿ ಹೋರಾಟಗಾರ ಹಾಗೂ ವಕೀಲರಾದ ಸಿ.ವಿರುಪಾಕ್ಷಪ್ಪ, ತುಪ್ಪಕ್ಕನಹಳ್ಳಿ ಗ್ರಾಮಸ್ಥರು ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು