1:46 PM Tuesday19 - March 2024
ಬ್ರೇಕಿಂಗ್ ನ್ಯೂಸ್
ಲೋಕಸಭಾ ಚುಣಾವಣೆ: ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ ದೇವರಮನೆಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ… ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5… ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26… ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್… ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ… ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ… ಮಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಇತ್ತೀಚಿನ ಸುದ್ದಿ

ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ ಮಾಡಿದ ರೈತರು

25/11/2021, 15:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಾಯುಭಾರ  ಕುಸಿತದಿಂದ ರಾಜ್ಯಾದ್ಯಂತ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜ್ಯದಲ್ಲಿ ರೈತನ ಕಷ್ಟ ಹೇಳಿ ತೀರದು.ಉತ್ತರ ಕರ್ನಟಕದಲ್ಲಿ ಮಳೆ ಏನೋ ಕಡಿಮೆ ಇದೆ, ಆದರೆ ಮೋಡ ಕವಿದ ವಾತಾವರಣದಿಂದ ವಾಣಿಜ್ಯ ಬೆಳೆ ದ್ರಾಕ್ಷಿ ಈಗ ರೋಗಕ್ಕೆ ತುತ್ತಾಗಿ ಬೆಳೆ ಸಂಪೂರ್ಣ ನಾಶವಾಗಿದೆ.


ಕೋವಿಡನಿಂದ್ ಸತತ ಎರಡು ವರ್ಷ ನಷ್ಟ ಅನುಭವಿಸಿದ ರೈತ ಈಗಲಾದರೂ ಲಾಭ ಆಗಬಹುದು ಎಂದು ರಾತ್ರಿ-ಹಗಲು ಕಷ್ಟಪಟ್ಟು ಇನ್ನೇನು ಬೆಳೆ ಚೆನ್ನಾಗಿ ಬಂತು ಅನ್ನೋವಷ್ಟರಲ್ಲಿ ಪ್ರಕೃತಿ ವಿಕೋಪಕ್ಕೆ ರೈತ ಬಲಿಪಶು ಆಗಿದ್ದಾನೆ.

ತುಂತುರು ಮಳೆಗೆ ದ್ರಾಕ್ಷಿ ಬೆಳೆ ಸಂಪೂರ್ಣ ಕೊಳೆತುಹೋಗಿವೆ. ಎಕರೆಗೆ ಸುಮಾರು ಎರಡರಿಂದ ಮೂರು ಲಕ್ಷ ರೂಪಾಯಿ ಖರ್ಚಾಗಿದ್ದು ಈಗ ಒಂದು ರೂಪಾಯಿ ಕೂಡ ನಮಗಿಲ್ಲ.  ಸೂಕ್ತ ಪರಿಹಾರ ಒದಗಿಸುವುದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ರೈತ ಪಾಂಡುರಂಗಹಬಗುಂಡೆ ಮಾಧ್ಯಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಅಥಣಿ ತಾಲೂಕಿನ ಅನಂತಪುರ ಹೂಬಳಿ ವ್ಯಾಪ್ತಿಯಲ್ಲಿ ಸುಮಾರು 100ರಿಂದ 200 ಎಕರೆ ದ್ರಾಕ್ಷಿ ಬೆಳೆದ ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪರಿಹಾರ ಒದಗಿಸಿ ಎಂದು ಮಾಂತೇಶ್ ಚಿಗ್ರೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮದ ರೈತರಾದ ಪ್ರವೀಣ್ ಪವಾರ ಮಾತನಾಡಿ ನಾನು ಸುಮಾರು 60 ಲಕ್ಷ ಖರ್ಚು ಮಾಡಿ ದ್ರಾಕ್ಷಿ ಬೆಳೆ ಬೆಳೆದಿದ್ದೇನೆ. ಬಡ್ಡಿ ಸಹಿತ ಬಂದಿಲ್ಲ ಎಂದು ನೋವನ್ನ ಹಂಚಿಕೊಂಡರು ಏನೆ ಆಗಲಿ ನೊಂದ ರೈತರ ಕೈ ಹಿಡಿಯುತ್ತ ಸರ್ಕಾರ ಅನ್ನೋದನ್ನ ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು