8:17 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಬಿಜೆಪಿಯವರಿಗಿಂತ ಪಕ್ಷೇತರರ ಸ್ಪರ್ಧೆ ನಮಗೆ ಸಮಸ್ಯೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

26/11/2021, 11:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಚುಣಾವಣೆಯಲ್ಲಿ ಬಿಜೆಪಿಗಿಂತ ನಮಗೆ ಪಕ್ಷೇತರ ಸಮಸ್ಯೆ ಬಹಳವಾಗಿದೆ. ಈ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸುವುದರಿಂದ ಎರಡೂ ಪಕ್ಷದವರಿಗೆ ಗೊಂದಲವಾಗಿದೆ. ಇದರಿಂದ ಎರಡೂ ಪಕ್ಷದವರು‌ ವಿಶೇಷ ತಂತ್ರಗಳನ್ನು ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಅವರು ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಹಮ್ಮಿಕೊಂಡ ವಿಧಾನ ಪರಿಷತ್ ಚುಣಾವಣೆ ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರ ಪ್ರಚಾರಾರ್ಥ ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಗ್ರಾಮ ಪಂಚಾಯತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

ರಮೇಶ ಜಾರಕಿಹೊಳಿ ಅವರು ಚುಣಾವಣೆಗಾಗಿ ಮಾತ್ರ ಸೀಮಿತವಾದ ವ್ಯಕ್ತಿ ಹೊರತು ಜನಸಾಮಾನ್ಯರ ಕಷ್ಟಗಳಿಗೆ ಬಂದವರಲ್ಲ, ಈ ಹಿಂದೆ ನಡೆದ ವಿಧಾನ‌ಪರಿಷತ್  ಚುಣಾವಣೆಯಲ್ಲಿ ನಮ್ಮ‌ಎದುರಾಳಿ ಯಾರು ಎಂದು ಗೊತ್ತಿರದೆ ನಮ್ಮವರಿಂದಲೇ ನಾವು ಸೋತಿದ್ವಿ‌. ಆದರೆ ಈ ಚುಣಾವಣೆಯಲ್ಲಿ ನಮ್ಮ ಎದುರಾಳಿ ಸ್ಪಷ್ಟವಾಗಿ ಗೊತ್ತಿರುವುದರಿಂದ ಸಂಘಟನೆ ಮಾಡಿ ಗೆಲ್ಲಬೇಕಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ನಾವು ಸ್ವತಂತ್ರವಾಗಿ ಪಕ್ಷ ಸಂಘಟನೆ ಮಾಡಲು ಸಾಧ್ಯ. ಜಿಲ್ಲೆಯ ಎಲ್ಲರೂ ಸೇರಿಕೊಂಡು ಅವರನ್ನು ಗೆಲ್ಲಿಸಿ ಈ ಹಿಂದೆ ಆದ ಮೋಸವನ್ನು ಮರೆಯಬೇಕಾಗಿದೆ. ಮತದಾರರು ಯಾವುದೇ ಆಮೀಷಕ್ಕೆ ಒಳಗಾಗದೆ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಮತಹಾಕಿ ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು