10:23 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ ತಾಲೂಕು ಆಡಳಿತ ನಿರ್ಲಕ್ಷ್ಯ: ದಲಿತ ಮುಖಂಡರ ಟೀಕೆ

27/11/2021, 08:58

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಸರ್ವರಿಗೂ ಸಮಾನತೆ ಒದಗಿಸಿ ಮೂಲಭೂತ ಹಕ್ಕುಗಳನ್ನು ನೀಡಿದ ಸಂವಿಧಾನ ರಚಿಸಿದ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಮಾಲಾರ್ಪಣೆ ಮಾಡದೆ ನಿರ್ಲವಹಿಸಿದೆ ಎಂದು ದಲಿತ ಮುಖಂಡರು ತಹಶೀಲ್ದಾರ್ ವಿರುದ್ದ ಕಿಡಿ ಕಾರಿದ್ದಾರೆ.

ಭಾರತ ಸಂವಿಧಾನ ದಿನವನ್ನು ಪ್ರತಿ ವರ್ಷ ನವೆಂಬರ್ 26 ರಂದು ಆಚರಣೆ ಮಾಡಲಾಗುತ್ತಿದ್ದು ತಾಲೂಕು ಕಚೇರಿ ಎದುರಲ್ಲೇ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲು ತಾಲೂಕು ಆಡಳಿತ ನಿರ್ಲಕ್ಷವಹಿಸಿದೆ ಎಂದು ದಲಿತ ಮುಖಡಂರು ಅಂಬೇಡ್ಕರ್ ಪ್ರತಿಮೆ ಮುಂದೆ ವಿರೋದ ವ್ಯಕ್ತಪಡಿಸಿದ್ದಾರೆ.

ದಲಿತ ಮುಖಂಡರು ವಿರೋಧ ವ್ಯಕ್ತಪಡಿಸಿದನಂತರ ಎಚ್ಚತ್ತ ತಾಲೂಕು ಆಡಳಿತ ಸಿಬ್ಬಂದಿಯನ್ನು ಕಳಿಸಿ ಸ್ವಚ್ಚತೆ ಮಾಡಲು ಮುಂದಾಗಿದ್ದಾರೆ. 

ಜಿಪಂ ಮಾಜಿ ಸದಸ್ಯ ಪ್ರಕಾಶ್ ಮಾತನಾಡಿ 1949 ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಸೆಲೆಬ್ರೇಟ್ ಮಾಡುತ್ತಿದ್ದೇವೆ.

ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949ರ ನವೆಂಬರ್ 26ರಂದೇ ಆದರೂ ಅನುಷ್ಠಾನಕ್ಕೆ  ತಂದಿದ್ದು 1950ರ ಜನವರಿ 26 ರಂದು. ಈ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ನಗರಸಭೆ ಉಪಾಧ್ಯಕ್ಷ ವಿಜಯ್‍ಕುಮಾರ್, ಎಸ್.ಎಚ್.ಸೈಯಾದ್, ಉಮೇಶ್ ಬ್ಯಾನರ್ಜಿ, ವಿನೋದ್ ಕುಮಾರ್,ಭದ್ರಿ, ಸಿ.ಶ್ರೀನಿವಾಸ್,ಡಿ.ಟಿ. ಭೂತಲಿಂಗಪ್ಪ, ಬೀಮಣ್ಣ, ನಾಗರಾಜ್, ಚಂದ್ರಪ್ಪ, ಅನಿಲ್ ಕುಮಾರ್,  ದಲಿತ  ಇತರರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು