4:42 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್…

ಇತ್ತೀಚಿನ ಸುದ್ದಿ

ಬೆಂಗಳೂರು: ಕೊರೊನಾದಿಂದ ಸಾವನ್ನಪ್ಪಿ 15 ತಿಂಗಳು ಕಳೆದರೂ ವಿಲೇವಾರಿಯಾಗದ ಶವಗಳು!!

29/11/2021, 19:17

ಬೆಂಗಳೂರು(reporterkarnataka.com): ಕೊರೊನಾ ಜಗತ್ತುನ್ನು ಕಾಡುತಿದ್ದರೆ ಮಾನವೀಯತೆ ಮರೆತ ಅದೆಷ್ಟೋ ಪ್ರಸಂಗಗಳು ಎದುರಾಗುತ್ತಿದೆ. ಇದೊಂದು ಮಾನವೀಯತೆ ಮರೆತ ಪ್ರಕರಣ ರಾಜ್ಯದ ನಿದ್ದೆಗೆಡಿಸಿದೆ. ಬೆಂಗಳೂರಿನ ರಾಜಾಜಿನಗರದ ಇಎಸ್ ಐ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ವಿಧವೆ ಸಹಿತ ಇಬ್ಬರ ಮೃತದೇಹಗಳು ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ 15 ತಿಂಗಳ ಕಾಲ ಅಂತ್ಯಸಂಸ್ಕಾರವನ್ನೂ ಕಾಣದೆ ಶವಾಗಾರದಲ್ಲಿ ಕೊಳೆಯುತ್ತಿದ್ದ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ.

ಎರಡು ಶವಗಳು ಕೊಳೆತ ಸ್ಥಿತಿಯಲ್ಲಿದ್ದರಿಂದ ಮುಖ ಚಹರೆ ಸಿಗದೆ ದೊಡ್ಡ ತಲೆನೋವಾಗಿತ್ತು. ಕೊನೆಗೆ ಒಂದೂವರೆ ವರ್ಷದಿಂದ ಮೃತರಾದವರ ಪಟ್ಟಿ ಮತ್ತು ಹಸ್ತಾಂತರ ಮಾಡಿದ ಶವಗಳ ವಿವರವನ್ನು ಸುದೀರ್ಘವಾಗಿ ಪರಿಶೀಲನೆ ನಡೆಸಿದಾಗ ಚಾಮರಾಜಪೇಟೆಯ ವಿಧವೆ ದುರ್ಗಾ ಮತ್ತು ಕೆ.ಪಿ. ಅಗ್ರಹಾರದ ಮುನಿರಾಜು ಎಂಬುದು ಗೊತ್ತಾಗಿದೆ. ಪೊಲೀಸರು, ದುರ್ಗಾ ಅವರ ಅಣ್ಣನ ಮೊಬೈಲ್ ನಂಬರ್ ಪಡೆದು ಕರೆ ಮಾಡಿ ವಿಷಯ ಮುಟ್ಟಿಸಿದರೂ ಪ್ರಯೋಜನವಾಗಿಲ್ಲ. ಮತ್ತೊಂದೆಡೆ ಮುನಿರಾಜು ಕಡೆಯವರ್ಯಾರೂ ಸಂಪರ್ಕಕಕ್ಕೆ ಸಿಕ್ಕಿಲ್ಲ. ಹೀಗಾಗಿ ರಾಜಾಜಿನಗರ ಪೊಲೀಸರು ಸೋಮವಾರ ಕೆ.ಪಿ. ಅಗ್ರಹಾರಕ್ಕೆ ಭೇಟಿ ಕೊಟ್ಟು ಮುನಿರಾಜು ಅವರ ಪಾಲಕರು ಮತ್ತು ಸಂಬಂಧಿಕರ ಬಗ್ಗೆ ಮಾಹಿತಿ ಕಲೆ ಹಾಕಲು ನಿರ್ಧರಿಸಿದ್ದಾರೆ.

ದಾಖಲೆ ಪರಿಶೀಲಿಸಿದಾಗ ಮೃತರ ಗುರುತು ಗೊತ್ತಾಗಿದೆ. ವಿಳಾಸ ಮತ್ತು ಸಂಬಂಧಿಕರ ಮೊಬೈಲ್ ನಂಬರ್ ಪಡೆದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು