8:31 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ಮಹಾವೀರ ಕಾಲೇಜಿನ ಎನ್ ಸಿ ಸಿ ಘಟಕದಿಂದ ಎನ್ ಸಿ ಸಿ ದಿನಾಚರಣೆ

29/11/2021, 15:53

ಮೂಡಬಿದಿರೆ(reporterkarnataka.com):  ಮಹಾವೀರ ಕಾಲೇಜಿನ ಎನ್ ಸಿ ಸಿ ಘಟಕದಿಂದ ಎನ್ ಸಿ ಸಿ ದಿನಾಚರಣೆಯನ್ನು ವೇಣೂರಿನ ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. 

ನವೆಂಬರ್ ತಿಂಗಳ 4ನೇ ಭಾನುವಾರವನ್ನು ಎನ್ ಸಿ ಸಿ ದಿನವನ್ನಾಗಿ ಪ್ರತಿವರ್ಷವೂ ಆಚರಿಸಲಾಗುತ್ತಿದ್ದು, 73ನೇ ವರ್ಷದ ಎನ್ ಸಿ ಸಿ ದಿನಾಚರಣೆಯನ್ನು ಈ ವರ್ಷ ನವೆಂಬರ್ 28ರಂದು ದೇಶದಲ್ಲೆಲ್ಲೆಡೆ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಆಚರಿಸಲಾಯಿತು.


ಕಾಲೇಜಿನ ಪ್ರಾಂಶುಪಾಲ್ ಡಾ ರಾಧಾಕೃಷ್ಣ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವನ್ನು ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಗೆ ದಿನಬಳಕೆಯ ವಸ್ತುಗಳನ್ನು ನೀಡುವ ಮುಖಾಂತರ ಹಾಗೂ ಶಾಲೆಯಲ್ಲಿ ಎನ್ ಸಿ ಸಿ ಕೆಡೆಟ್ ಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡುವ ಮೂಲಕ ಎನ್ ಸಿ ಸಿ ದಿನಾಚರಣೆಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಕ್ರಿಸ್ತರಾಜ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಶಲೆಟ್ ಸ್ವಾಗತಿಸಿ ಶಾಲೆಯ ಶಿಕ್ಷಕಿ ಶಾಂತ ಮಾರ್ಟಿಸ್ ವಂದಿಸಿದರು. ಕೆಡೆಟ್ ಪ್ರಣಮ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ ಸಿ ಸಿ ಘಟಕದ ಅಧಿಕಾರಿ ಶಿವಪ್ರಸಾದ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು