3:41 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

‘ವಾಯ್ಸ್ ಆಫ್ ಆರಾಧನಾ’: ನವೆಂಬರ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಪ್ರಥಮ್ ಮಂಗಳೂರು ಹಾಗೂ ಧನ್ವಿ ರೈ ಕೋಟೆ ಆಯ್ಕೆ

29/11/2021, 12:49

ಮಂಗಳೂರು(reporterkarnataka.com):ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಪ್ರಥಮ್ ಮಂಗಳೂರು ಹಾಗೂ ಧನ್ವಿ ರೈ ಕೋಟೆ ಆಯ್ಕೆಗೊಂಡಿದ್ದಾರೆ.

ಪ್ರಥಮ್ ಮಂಗಳೂರು ಅವರು ಪೂರ್ಣಿಮಾ ಹಾಗೂ ಗಿರೀಶ್ ದಂಪತಿಯ ದ್ವಿತೀಯ ಪುತ್ರ. ಪ್ರಸ್ತುತ ಕುಲಶೇಖರದ ಸೇಕ್ರೆಟ್ ಹಾರ್ಟ್ ಹೈಯರ್ ಪ್ರೈಮರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಸಂಗೀತ, ಡೈಲಾಗ್  ಹೇಳುವುದು ಮತ್ತು ಸ್ಪೋರ್ಟ್ಸ್ ಇವನ ಹವ್ಯಾಸ. ಸಂಗೀತದಲ್ಲಿ ಹಲವಾರು ಬಹುಮಾನ ಪಡೆದಿರುತ್ತಾನೆ. ಕಲ್ಕೂರ ಪ್ರತಿಷ್ಠಾನ ರಾಷ್ಟ್ರೀಯ ಮಕ್ಕಳ ಉತ್ಸವ ಕೃಷ್ಣವೇಷ ಸ್ಪರ್ಧೆ 2021 ಸಾಲಿನ ಛಾಯಾ ಕೃಷ್ಣ ಸ್ಪರ್ಧೆಯಲ್ಲಿ ತೃತೀಯ ಹಾಗೂ ವಾಯ್ಸ್ ಆಫ್ ಆರಾಧನಾ ಕೃಷ್ಣ ವೇಷ ಸ್ಪರ್ಧೆ ಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾನೆ.

ಇತ್ತೀಚಿಗಿನ ದಿನಗಳಲ್ಲಿ ಎಡಿಟಿಂಗ್ ನಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿದ್ದಾನೆ. ಕಾರ್ಕಳ ಅಜೆಕಾರ್ ನಲ್ಲಿ ನಡೆದ ಆದಿ ಗ್ರಾಮೋತ್ಸವದಲ್ಲಿ ಬಾಲ ಪ್ರತಿಭೆ ಗೌರವವನ್ನು ಪಡೆದು ಕೊಂಡಿರುತ್ತಾನೆ. ಸ್ಪಂದನ ವಾಹಿನಿಯಲ್ಲಿ ಕಿನ್ನರ ಮೇಳ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾನೆ. ವಾಯ್ಸ್ ಆಫ್ ಆರಾಧನಾದಲ್ಲಿ ಜುಲೈ ತಿಂಗಳ ಬೆಸ್ಟ್ ಪರ್ಫಾರ್ಮೆನ್ಸ್ ಬಹುಮಾನ ಪಡೆದಿರುತ್ತಾನೆ.

ಇನ್ನು ಧನ್ವಿ ರೈ ಕೋಟೆ ರವಿಶಂಕರ್ ರೈ  ಕೆ. ಹಾಗೂ ವಿಜಯಲಕ್ಷ್ಮೀ ರೈ ಕೆ. ಅವರ ಪುತ್ರಿ. ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಕೋಟೆಯ ನಿವಾಸಿ.ಕೇವಲ 11 ವರ್ಷ ವಯಸ್ಸಿನ ಧನ್ವಿ ಪಾಣಾಜೆಯ ವಿವೇಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಯುತ್ತಿದ್ದಾಳೆ.

ಧನ್ವಿಯು ಪ್ರತಿಭಾ ದೀಪ ಪುರಸ್ಕೃತೆ,ಯಕ್ಷಗಾನ,ನೃತ್ಯ, ಭಾಷಣ, ಚಿತ್ರ ರಚನೆಯಲ್ಲಿ ಹಲವು ಪ್ರಶಸ್ತಿ ಪತ್ರ ಪಡೆದಿದ್ದಾಳೆ. 60ಕ್ಕಿಂತಲೂ ಹೆಚ್ಚು ಪ್ರದರ್ಶನ ನೀಡಿದ್ದಾಳೆ. ವಾಯ್ಸ್ ಆಫ್ ಆರಾಧನದಲ್ಲಿ ಪ್ರತಿ ದಿನ ಟಾಸ್ಕ್ ನಲ್ಲಿ ಭಾಗವಹಿಸುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು