7:03 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ಮಣಿಪಾಲ: ಹಾಸ್ಟೆಲ್ ಸಿಗದಿದ್ದಕ್ಕೆ ಪಾಲಿಟೆಕ್ನಿಕ್ ವಿದ್ಯಾರ್ಥಿ ಪಿಜಿಯಲ್ಲಿ ಆತ್ಮಹತ್ಯೆ

02/12/2021, 09:43

ಮಣಿಪಾಲ(reporterkarnataka.com): ಮೆಕ್ಯಾನಿಕ್ ಡಿಪ್ಲೋಮಾ ವಿದ್ಯಾರ್ಥಿಯೋರ್ವ ಜೀವನದಲ್ಲಿ ಮನನೊಂದು ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಚಾರ್ವಿಕ್ ಪಿಜಿಯಲ್ಲಿ ನಡೆದಿದೆ.

ಸುನೀಲ್ ಕುಮಾರ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಮಣಿಪಾಲ ಈಶ್ವರನಗರದ ಟಿಎಂಎ ಪೈ ಪಾಲಿಟೆಕ್ನಿಕ್ ನಲ್ಲಿ 1ನೇ ವರ್ಷದ ಮೆಕ್ಯಾನಿಕ್ ಡಿಪ್ಲೋಮಾ ವ್ಯಾಸಂಗ ಮಾಡಿಕೊಂಡಿದ್ದನು. ಒಂದು ತಿಂಗಳಿನಿಂದ ಕಾಲೇಜು ಆರಂಭವಾದ ಕಾರಣ ಸುನೀಲ್ ಕುಮಾರ್ ಚಾರ್ವಿಕ್ ಪಿಜಿಯಲ್ಲಿ ವಾಸವಿದ್ದನು. ಆತನಿಗೆ ಪಿಜಿಯಲ್ಲಿ ಉಳಿದುಕೊಳ್ಳಲು ಇಷ್ಟವಿಲ್ಲದೇ ಇದ್ದು, ಈ ಬಗ್ಗೆ ತಂದೆ- ತಾಯಿಯ ಬಳಿ ಹೇಳಿಕೊಂಡಿದ್ದನು. ಅವರು ಮುಂದಿನ ವರ್ಷ ಹಾಸ್ಟೆಲ್ ಸಿಗುತ್ತದೆ, ಅಲ್ಲಿಯವರೆಗೂ ಪಿಜಿಯಲ್ಲಿ ಇರುವಂತೆ ಸಮಾಧಾನಪಡಿಸಿದ್ದರು. ಆದರೆ ಸುನಿಲ್ ಇದೇ ಚಿಂತೆಯಿಂದ ಅಥವಾ ಇತರೆ ಯಾವುದೋ ಹೇಳಿಕೊಳ್ಳಲಾಗದ ಕಾರಣದಿಂದ ಮನನೊಂದು  ಸೋಮವಾರ (ನ.29) ಬೆಳಿಗ್ಗೆ 9.45ರಿಂದ ಮಧ್ಯಾಹ್ನ 12 ಗಂಟೆಯ ಮಧ್ಯಾವಧಿಯಲ್ಲಿ ತಾನು ವಾಸವಿದ್ದ ಪಿಜಿಯ ಕೋಣೆಯ ಸೀಲಿಂಗ್ ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು