ಇತ್ತೀಚಿನ ಸುದ್ದಿ
ರಮೇಶ್ ಜಾರಕಿಹೊಳಿ ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧವೇ ತನ್ನ ತಮ್ಮನ ಕಣಕ್ಕಿಳಿಸಿದ್ದಾರೆ: ಸಿದ್ದರಾಮಯ್ಯ ಟೀಕೆ
03/12/2021, 14:16
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ತನ್ನ ಪಕ್ಷದ ವಿರುದ್ಧವಾಗಿಯೇ ಅಭ್ಯರ್ಥಿ ನಿಲ್ಲಿಸಿದ್ದಾರೆ. ನಮ್ಮ ಪಕ್ಷದ ಬಗ್ಗೆ ಹೇಳಿಕೆ ನೀಡೋಕೆ ಅವರಿಗೆ ಯಾವ ನೈತಿಕತೆ ಇದೆ. ಲಖನ್ ಜಾರಕಿಹೊಳಿಯನ್ನ ಚುನಾವಣೆಗೆ ನಿಲ್ಲಿಸಿರೋದು ಯಾರು? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಗೂಂಡಾಗಳನ್ನು ಕರೆಯಿಸಿ ಕಾಂಗ್ರೆಸ್ ನಿಂದ ಪ್ರಚಾರ ನಡೆಸಲಾಗುತ್ತಿದೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ಟಾಂಗ್ ನೀಡಿದರು.
ಬಿಜೆಪಿ ಅಧಿಕೃತ ಅಭ್ಯರ್ಥಿ ಇದ್ರೂ ಅವರ ತಮ್ಮನನ್ನ ನಿಲ್ಲಿಸಿದ್ದಾರೆ. ಸಿಎಂ ಬದಲಾವಣೆ ಕುರಿತು ಈಶ್ವರಪ್ಪ ಬಾಯಿತಪ್ಪಿ ಸತ್ಯ ಹೇಳಿದ್ದಾರೆ. ಆಮೇಲೆ ಸರಿಪಡಿಸಿಕೊಳ್ಳಲು ಹೋಗುತ್ತಿದ್ದಾರೆ, ಆದರೆ ಜನರಿಗೆ ಗೊತ್ತಾಗಿದೆ ಎಂದು ಸಿದ್ದರಾಮಯ್ಯ ನುಡಿದರು.