10:19 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ನಾಪೋಕ್ಲು: ಜನರ ಸಮಸ್ಯೆ ಪರಿಹಾರಕ್ಕೆ ಡಿ.18ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ

16/12/2021, 08:31

ಮಡಿಕೇರಿ(reporterkarnataka.com): 

ತಹಶೀಲ್ದಾರರು ಮತ್ತು ಇತರ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್ 18 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ನಡೆಸುವ ಬಗ್ಗೆ ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡಿ ರೈತರ ದಾಖಲೆಗಳು ಹಾಗೂ ಸೇವೆಯನ್ನು ಪರಿಶೀಲಿಸಿ ಪರಿಹಾರ ಕ್ರಮವಹಿಸಲು ತಹಶೀಲ್ದಾರರು ಮತ್ತು ಇತರೆ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್, 18 ರಂದು ಬೆಳಗ್ಗೆ 10 ಗಂಟೆಗೆ ನಾಪೋಕ್ಲು ಹೋಬಳಿಯ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಪೋಕ್ಲು ವೃತ್ತಕ್ಕೆ ಸಂಬಂಧಿಸಿದಂತೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  

ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಾಪೋಕ್ಲು ವೃತ್ತಕ್ಕೆ ಸಂಬಂಧಿಸಿದಂತೆ ಗ್ರಾಮಗಳ ಪಹಣಿ ದಾಖಲೆಗಳ ತಿದ್ದುಪಡಿ, ಗ್ರಾಮದ ಪೌತಿ ಖಾತೆಗಳ ಕ್ರಮಗೊಳಿಸುವ ವಿಷಯಗಳು, ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ವಿಷಯಗಳು, ಆಹಾರ ಪಡಿತರ ಚೀಟಿಗೆ ಸಂಬಂಧಿಸಿದ ವಿಷಯಗಳು, ಪೋಡಿ, ಅಳತೆ ವಿಚಾರಕ್ಕೆ ಸಂಬಂಧಿಸಿದ ವಿಷಯಗಳು, ಸ್ಮಶಾನ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ಜಮೀನು ಕಾಯ್ದಿರಿಸುವಿಕೆ, ಸರ್ಕಾರಿ ಜಮೀನಿನ ಒತ್ತುವರಿ ವಿಚಾರಗಳು, ಆಧಾರ್ ಕಾರ್ಡಿಗೆ ಸಂಬಂಧಿಸಿದ ವಿಷಯಗಳು, ನಾಡಕಚೇರಿ, ಎಜೆಎಸ್ಕೆಪ ಕೇಂದ್ರಗಳಲ್ಲಿ ನೀಡುವ ಸೇವೆಗಳ ಕುರಿತು, ಅತಿವೃಷ್ಟಿ ಪರಿಹಾರ ವಿಚಾರಗಳು ಮತ್ತು ಗ್ರಾಮದ ಸಮಸ್ಯೆಗಳ ಇತರೆ ವಿಷಯಗಳ ಕುರಿತು ಅರ್ಜಿ ಸ್ವೀಕರಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅಂತಿಮ ವಿಲೇವಾರಿ/ ಫಲಾನುಭವಿಗಳಿಗೆ ಸೌಲಭ್ಯ ನೀಡಲು ಕ್ರಮವಹಿಸಲಾಗುವುದು ಎಂದು ತಹಶೀಲ್ದಾರರಾದ ಪಿ.ಎಸ್.ಮಹೇಶ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು