2:06 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಹಳೆಯಂಗಡಿ ಗ್ರಾಪಂನಲ್ಲಿ ಭ್ರಷ್ಟಾಚಾರದ ವಾಸನೆ: 9/11 ನೀಡಲು ಪಿಡಿಒ ಹಿಂದೇಟು; 3 ತಿಂಗಳಿನಿಂದ ಕಚೇರಿ ಅಲೆಯುತ್ತಿರುವ ಹಿರಿಯ ನಾಗರಿಕ

19/12/2021, 16:21

ಮಂಗಳೂರು(reporterkarnataka.com): ಜಾಗದ 9/11 ವರ್ಗಾವಣೆ ಕುರಿತು ಹಿರಿಯ ನಾಗರಿಕರೊಬ್ಬರನ್ನು ಗ್ರಾಮ ಪಂಚಾಯಿತಿ ಅಧಿಕಾರಿಯೊಬ್ಬರು ಸತಾಯಿಸುತ್ತಿರುವ ಘಟನೆ ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಇದರ ಹಿಂದೆ ಭ್ರಷ್ಟಾಚಾರ ವಾಸನೆ ಮೂಗಿಗೆ ಬಡಿಯಲಾರಂಭಿಸಿದೆ.
68ರ ಹರೆಯದ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಖರೀದಿಸಿದ್ದರು. ಜಾಗದ 9/11 ದಾಖಲೆಯನ್ನು ಅವರ ಹೆಸರಿಗೆ ವರ್ಗಾವಣೆ ಮಾಡಬೇಕಿತ್ತು. ಈ ಕುರಿತು ಪದ್ಮನಾಭ ಸುವರ್ಣ ಅವರು ಸೆಪ್ಟೆಂಬರ್ 2, 2021ರಂದು ಎಲ್ಲ ದಾಖಲೆಯನ್ನು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು. ಹಾಗೆ 9/11 ವರ್ಗಾವಣೆ ಮಾಡಿಕೊಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಹಲವು ಬಾರಿ ವಿನಂತಿಸಿದ್ದರು. ಆದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಿರಿಯ ನಾಗರಿಕ ಮನವಿಗೆ ಕ್ಯಾರೇ ಮಾಡುತ್ತಿಲ್ಲ.

ಪದ್ಮನಾಭ ಸುವರ್ಣ ಅವರಿಗೆ ಅಗತ್ಯವಿರುವ 9/11 ವರ್ಗಾವಣೆ ಮಾಡಿಕೊಡಲು ಹಲವು ಸಮಯದಿಂದ ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ಡಿಸೆಂಬರ್ 13ರಂದು ಪದ್ಮನಾಭ ಸುವರ್ಣ ಅವರು ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ತೆರಳಿ ಮತ್ತೆ ವಿನಂತಿ ಮಾಡಿಕೊಂಡಾಗಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇನ್ನೂ ಒಂದು ತಿಂಗಳ ಕಾಲಾವಕಾಶ ಬೇಕು ಎಂದು ಹೇಳಿದ್ದರು.  ಪದ್ಮನಾಭರ ಆತ್ಮೀಯರೊಬ್ಬರು ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ವಿನಂತಿಸಿದಾಗಲೂ ಒಂದು ತಿಂಗಳ ಸಮಯ ಬೇಕು ಎಂದು ಹೇಳಿದ್ದರು. ಆಗ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ವಿಳಂಬದ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದಾಗ, ಪಿಡಿಒ ಅವರು ದರ್ಪದಿಂದ ಅವರ ಬಳಿಯೇ ಪಡೆದುಕೊಳ್ಳಿ, ಇಲ್ಲಿಗೆ ಯಾಕೆ ಬರುತ್ತೀರಿ ಎಂದು ಉಡಾಫೆಯಿಂದ ಉತ್ತರಿಸಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಕಾರಣಕ್ಕಾಗಿ ವಿಳಂಬ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಇಂತಹ ಭ್ರಷ್ಟ ಅಧಿಕಾರಿ ವಿರುದ್ಧ ಜಿಪಂ ಸಿಇಒ ಕಾನೂನು ಕ್ರಮ ಕೈಗೊಂಡು ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕ ಪದ್ಮನಾಭ ಸುವರ್ಣ ಅವರಿಗೆ ನ್ಯಾಯ ಒದಗಿಸುವುದು ಇಂದಿನ ಅಗತ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು