8:25 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ?: 6 ತಿಂಗಳಲ್ಲೇ ಸಿಎಂ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳುವರೇ?

20/12/2021, 15:16

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಷಯ ಮುನ್ನಲೆಗೆ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಇದಕ್ಕೆ ಪುಷ್ಟಿ ನೀಡುವಂತೆ ಅಧಿಕಾರ ಶಾಶ್ವತವಲ್ಲ ಎನ್ನುವ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವಾದ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಭಾನುವಾರ ಲಿಂಗಾಯತ ಪಂಚಮಸಾಲಿ ಸಮುದಾಯ ಭವನದ ಕಾಮಗಾರಿಗೆ ಅಡಿಗಲ್ಲು ಮತ್ತು ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ತೀವ್ರ ಭಾವಜೀವಿಯಾದ ಸಿಎಂ ಅವರುಅಧಿಕಾರದ ಎಲ್ಲಾ ಸ್ಥಾನಗಳು ತಾತ್ಕಾಲಿಕ, ಯಾವುದು ಶಾಶ್ವತವಲ್ಲ.ಈ ಜೀವನ ಶಾಶ್ವತವಲ್ಲ, ನಾವು ಎಷ್ಟು ದಿನ ಬದುಕುತ್ತೇವೆ ಎಂಬುದು ನಮಗೆ ತಿಳಿದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರದ ಎಲ್ಲಾ ಹುದ್ದೆಗಳೂ ಶಾಶ್ವತವಲ್ಲ. ಈ ಬಗ್ಗೆ ನಾವು ನಿರಂತರವಾಗಿ ಜಾಗೃತರಾಗಿರಬೇಕು ಎಂದು ಹೇಳಿದರು.

ಕ್ಷೇತ್ರದ ಹೊರಗಡೆ ಮಾತ್ರ ನಾನು ಸಿಎಂ, ಇಲ್ಲಿ ಬಂದಾಗ ಕೇವಲ ಬಸವರಾಜ ಬೊಮ್ಮಾಯಿ. 

ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರದಿಂದಲೇ ನಾನು ರಾಜ್ಯದ ಸಿಎಂ ಆಗಿದ್ದೇನೆ. ನಾನು ಯಾವಾಗಲೂ ಹೇಳುವ ಒಂದು ವಿಷಯವೆಂದರೆ, ನಾನು ಈ ಕ್ಷೇತ್ರದಿಂದ ಹೊರಗಿರುವಾಗ ನಾನು ಗೃಹ ಸಚಿವ, ಜಲಸಂಪನ್ಮೂಲ ಸಚಿವನಾಗಿರಬಹುದು. ಆದರೆ, ನಾನು ಇಲ್ಲಿಗೆ ಹಿಂತಿರುಗಿದಾಗಲೆಲ್ಲಾ ನಾನು ಬಸವರಾಜ ಬೊಮ್ಮಾಯಿ ಮಾತ್ರ ಎಂದರು.

“ನಿಮ್ಮ ಮನೆಗೆ ಬಂದಾಗ ನೀವು ನನಗೆ ರೊಟ್ಟಿ ತಿನ್ನಿಸಿದ್ದೀರಿ, ಅದನ್ನು ಎಂದಿಗೂ ಮರೆಯುವುದಿಲ್ಲ. ನಾನು ಯಾವುದೇ ಕೆಲಸ ಮಾಡಿದರೂ ನಿಮಗೆ ಸದಾ ಋಣಿಯಾಗಿರುತ್ತೇನೆ. ನನಗೆ ಯಾವುದೇ ದೊಡ್ಡ ಆಸೆಗಳಿಲ್ಲ. ಆದರೆ ನನ್ನ ಕ್ಷೇತ್ರದ ಜನರ ಪ್ರೀತಿಗೆ ಸದಾ ಪಾತ್ರನಾಗಬೇಕು ಎಂದು ಬಯಸುತ್ತೇನೆ” ಎಂದು ಸಿಎಂ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಜನತಾದಳ ಸರಕಾರ ಪತನಗೊಂಡ ಬಳಿಕ ಯಡಿಯೂರಪ್ಪ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂತು. ನಂತರ ಹೈಕಮಾಂಡ್ ಸೂಚನೆ ಮೇರೆಗೆ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಸವರಾಜ ಬೊಮ್ಮಾಯಿ ಈ ವರ್ಷದ ಜುಲೈನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಇನ್ನು ಸುಮಾರು 16 ತಿಂಗಳಲ್ಲಿ ಪ್ರಸಕ್ತ ವಿಧಾನಸಭೆಯ ಅವಧಿ ಮುಗಿದು ಚುನಾವಣೆ ನಡೆಯಲಿದೆ. ಅಷ್ಟರಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯಾಗಲಿದೆ ಎನ್ನಲಾಗಿದೆ. ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷರೂ ಬದಲಾಗಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು