1:23 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಶನಿವಾರಸಂತೆ: ವಿಜಯ ದಿವಸ್ ಆಚರಣೆ; ಬೈಕ್ ಮತ್ತು ವಾಹನ ಜಾಥಾ

20/12/2021, 11:38

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆ ಹಿಂದು ಜಾಗರಣ ವೇದಿಕೆ ಹಾಗೂ ಸೋಮವಾರಪೇಟೆ ತಾಲೂಕು ಯುವ ವಾಹಿನಿ ನೇತೃತ್ವದಲ್ಲಿ ಶನಿವಾರ ಸಂತೆಯಲ್ಲಿ ವಿಜಯ ದಿವಸ (ಬಾಂಗ್ಲಾ ವಿಮೋಚನಾ ದಿನ) ಪ್ರಯುಕ್ತ ಬೈಕ್ ಮತ್ತು ವಾಹನ ಜಾಥಾ ನಡೆಸಲಾಯಿತು.

 ಶನಿವಾರ ಸಂತೆಯ ಗೋಪಾಲಪುರದಿಂದ ಬೈಕ್ ಜಾಥಾ ಹೊರಟು ಬೆಂಗಳೂರು ಮಾರ್ಗವಾಗಿ ಕೊಡ್ಲಿಪೇಟೆ ಮೂಲಕ  ಶನಿವಾರಸಂತೆಯ ಕೆ. ಆರ್. ಸಿ. ಸರ್ಕಲ್ ತಲುಪಿತು. ನಂತರ ಕೆ ಆರ್ ಸಿ ಸರ್ಕಲ್ ನಲ್ಲಿ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು.   ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸೈನಿಕ ಸಂಘದ ಅಧ್ಯಕ್ಷ ಮಹೇಶ್ ವಹಿಸಿದ್ದರು . 1971ರ ಯುದ್ಧ ದಲ್ಲಿ ಪಾಲ್ಗೊಂಡಿದ್ದ ನಿವೃತ್ತ ಯೋದರದ ಕಾಜುರು ಗ್ರಾಮದ ಎಂ .ಸ್ ಪೊನ್ನಪ್ಪ , ಎಂ.ಎಸ್ ಕಾಳಪ್ಪ , ಅಪ್ಪಾಜಿ .ಶನಿವಾರಸಂತೆಯ ಕಳಲೇ ಗ್ರಾಮದ ಕೆ. ವಿ ಮಂಜುನಾಥ್ ಮತ್ತು ಪುಟ್ಟ ಸ್ವಾಮಿ  ಇವರನ್ನು ಸನ್ಮಾನಿಸಲಾಯಿತು.   ಸೇವಾ ಭಾರತಿ ಜಿಲ್ಲಾ ಅಧ್ಯಕ್ಷರಾದ ಟಿ. ಸಿ. ಚಂದ್ರನ್ ಕಾರ್ಯಕ್ರಮದ ಬೌದ್ಧಿಕ್  ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಸುಭಾಸ್ ತಿಮ್ಮಯ್ಯ, ಸಹ ಸಂಪರ್ಕ ಪ್ರಮುಖ್ ಎಂ. ಬಿ. ಉಮೇಶ್,  ತಾಲೂಕು ಅಧ್ಯಕ್ಷ ಸುನಿಲ್, ಉಪಾಧ್ಯಕ್ಷರಾದ ಸಂದೀಪ್, ಪ್ರಧಾನ ಕಾರ್ಯದರ್ಶಿ ಬೊಜೇಗೌಡ, ಕಾರ್ಯದರ್ಶಿ ಲೋಕೇಶ್, ಹಿಂದು ಯುವ ವಾಹಿನಿ ಜಿಲ್ಲಾ ಪ್ರಮುಖ್ ಚೇತನ್, ವಲಯ  ಪ್ರಮುಖರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು