7:14 AM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಮಡಿಕೇರಿಯ ಮೇಕೇರಿಯಲ್ಲಿ ವಿಜಯ್ ದಿವಸ್:  10ನೇ ವರ್ಷದ ರಕ್ತದಾನ ಶಿಬಿರ          

26/12/2021, 20:04

ಮಡಿಕೇರಿ(reporterkarnataka.com): ಸ್ವಾಗತ ಯುವಕ ಸಂಘ ಮೇಕೇರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮೇಕೇರಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 10ನೇ ವರ್ಷದ ರಕ್ತದಾನ ಶಿಬಿರ ನಡೆಸಲಾಯಿತು. 

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷೆ ಹಾಗೂ ಮಡಿಕೇರಿ ನಗರ ಸಭೆಯ ಅಧ್ಯಕ್ಷರಾದ ಅನಿತಾ ಪೂವಯ್ಯ ನೆರವೇರಿಸಿದರು. ರಕ್ತದಾನದ ಮಹತ್ವದ ಬಗ್ಗೆ ರಕ್ತನಿಧಿ ಕೇಂದ್ರದ ವೈದ್ಯರಾದ ಡಾ. ಕರುಂಬಯ್ಯ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಕಾಂಗೀರ ಸತೀಶ್  ಮಾತನಾಡಿ, ಈ ದೇಶ ಕಂಡ ಅಪ್ರತಿಮ ದೇಶಭಕ್ತ ಅಜಾತಶತ್ರು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಆದರ್ಶಗಳನ್ನೇ ಪ್ರೇರಣೆಯಾಗಿಯಾಗಿಸಿ ಸ್ಥಳೀಯ ಸ್ವಾಗತ ಯುವಕ ಸಂಘದ ಮೂಲಕ ನಡೆಸುತ್ತಿರುವ ರಕ್ತದಾನ ಶಿಬಿರ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಅಧ್ಯಕ್ಷತೆಯನ್ನು ಜಿಲ್ಲಾ ಯುವಕ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ , ಗೌರಿಶಂಕರ ದೇವಾಲಯದ ಟ್ರಸ್ಟಿ ಪಿ.ಎಂ. ದಾಮೋದರ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಫೀಕ್,ಮುಖ್ಯೋಪಾಧ್ಯರಾದ ಸಬೀತಾ, ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು,ಕಾಂಗೀರ ಕೀರ್ತನ್,ಹನೀಫ್,ಶುಭಾ ಭರತ್ ಉಪಸ್ಥಿತರಿದ್ದರು. 

ಯುವಕ ಸಂಘದ ಅಧ್ಯಕ್ಷ ಜೆ.ಹರೀಶ್ ಸ್ವಾಗತಿಸಿ.ಸದಸ್ಯ ಟಿ.ವಿ. ಲೋಕೇಶ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು