5:36 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

2022- 23ನೇ ವಿತ್ತೀಯ ವರ್ಷದಲ್ಲಿ ಎಂಸಿಸಿ ಬ್ಯಾಂಕಿಗೆ 12.20 ಕೋಟಿ ರೂ. ದಾಖಲೆ ಲಾಭ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

13/04/2023, 00:56

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 16 ಶಾಖೆಗಳನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2022- 23ನೇ ವಿತ್ತೀಯ ವರ್ಷದಲ್ಲಿ 12.20 ಕೋಟಿ ರೂ. ದಾಖಲೆ ಲಾಭವನ್ನು ಪಡೆದಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಹೇಳಿದರು.
ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2022- 23ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಗಣನೀಯ ಪ್ರಮಾಣದಲ್ಲಿ ವ್ಯವಹಾರ ಪ್ರಗತಿಯನ್ನು ಸಾಧಿಸಿದೆ. ಬ್ಯಾಂಕಿನ ನಿವ್ವಳ ಮೌಲ್ಯ 46 ಕೋಟಿ ರೂ. ನಿಂದ 59 ಕೋಟಿ ರೂಪಾಯಿಗೆ ಏರಿದೆ. ಬ್ಯಾಂಕ್ ವ್ಯವಹಾರ 933.21 ಕೋಟಿ ತಲುಪಿದೆ ಎಂದು ವಿವರ ನೀಡಿದರು.
ದಾಖಲೆ ಲಾಭ ಮತ್ತು ಕನಿಷ್ಠ ಎನ್ ಪಿಎ ಜೊತೆಗೆ 2022- 23ನೇ ಹಣಕಾಸು ವರ್ಷದಲ್ಲಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಗಳ ಶ್ರಮದಿಂದ ಬ್ಯಾಂಕ್ ಸ್ಥಾಪನೆಯಾದಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಶೀಘ್ರದಲ್ಲೇ ಈ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ನುಡಿದರು.


ಕರ್ನಾಟಕ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಎಂಸಿಸಿ ಬ್ಯಾಂಕಿಗೆ 111 ವರ್ಷಗಳ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.37% ಎನ್ ಪಿಎ ದಾಖಲಾಗಿದೆ. ಬ್ಯಾಂಕಿನ ಇತಿಹಾಸದಲ್ಲೇ 2022-23ನೇ ವಿತ್ತೀಯ ವರ್ಷದಲ್ಲಿ ಮೊದಲ ಬಾರಿಗೆ ಸ್ಥಾಪಕರ ದಿನಾಚರಣೆಯನ್ನು ಬ್ಯಾಂಕಿನಲ್ಲಿ ಸಂಭ್ರಮೋಲ್ಲಾಸದಿಂದ ಆಚರಿಸಲಾಯಿತು. ನವೀಕೃತ ಸಭಾ ಭವನಕ್ಕೆ ಸ್ಥಾಪಕರ ಹೆಸರು ಇಡಲಾಯಿತು. ಎಲ್ಲ 16 ಶಾಖೆಗಳಲ್ಲಿ ಗ್ರಾಹಕರ ಸಮಾವೇಶ ಏರ್ಪಡಿಸಲಾಯಿತು. ಇದು ಬ್ಯಾಂಕಿನ ಗ್ರಾಹಕರ ಸಂಖ್ಯೆ ವೃದ್ದಿಸಲು ಸಹಕಾರಿ ಆಯಿತು ಎಂದು ಅನಿಲ್ ಲೋಬೊ ತಿಳಿಸಿದರು.
ಬ್ಯಾಂಕಿನ ಶತಮಾನೋತ್ತರ ದಶಮಾನೋತ್ಸವವನ್ನು ಸಾಮಾಜಿಕ ಕಾಳಜಿಯೊಂದಿಗೆ ಸಮಾಜದ ಅಶಕ್ತ ವರ್ಗದ ಜನರ ಚಿಕಿತ್ಸೆ, ವಸತಿ ನಿವೇಶನ ದುರಸ್ತಿ, ಮಕ್ಕಳ ವಿದ್ಯಾಭ್ಯಾಸ ಹಾಗೂ ಹೆಣ್ಣು ಮಕ್ಕಳ ವಿವಾಹ ವೆಚ್ಚಕ್ಕೆ ನೆರವು ನೀಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು ಎಂದು ಬ್ಯಾಂಕ್ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಾ ಪ್ರಬಂಧಕ ಸುನಿಲ್ ಮಿನೇಜಸ್, ಸದಸ್ಯರಾದ ಆಂಡ್ರ್ಯೂ ಡಿಸೋಜ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೋಜ, ಎಲ್ರೋಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೆರೊ, ರೋಶನ್ ಡಿಸೋಜ, ವಾರ್ಸೆಲ್ ಡಿಸೋಜ, ಸಿ.ಜಿ. ಪಿಂಟೋ, ಸುಶಾಂತ್ ಸಲ್ದಾನ್ಹಾ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋಜ, ಅಲ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿಕ್ರೂಜ್ ಹಾಗೂ ಶರ್ಮಿಳಾ ಮಿನೇಜಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು