2:38 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಏಳು ದಿನಗಳ ದೈನಂದಿನ ಚಟುವಟಿಕೆಗಳ ಕಾರ್ಯಗಾರ

04/01/2022, 16:06

ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರ ಸೇರಿದಂತೆ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಏಳು ದಿನಗಳ ವಿಶೇಷ ಕಾರ್ಯಾಗಾರ ತಲಪಾಡಿ ಶಾರದ ಕಾಲೇಜಿನಲ್ಲಿ ನಡೆಯಿತು.

23-12-21ರಂದು ಡಾ.ಸಂದೀಪ್ ಬೇಕಲ್ ಕ್ರಿಯಾ ಶರೀರ ವಿಭಾಗ, ಶಾರದಾ ಆಯುರ್ವೇದ ಕಾಲೇಜು ತಲಪಾಡಿ. ಇವರು ಪ್ರಥಮ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.


24-12- 21ರಂದು ಕೋವಿಡ್ ಮುಂಜಾಗ್ರತ ಎಚ್ಚರಿಕೆ ಹಾಗೂ ಕ್ರಮಗಳ ಬಗ್ಗೆ ಸಮೀಕ್ಷೆ ಮೂಲಕ ಜನ ಜಾಗೃತಿಯನ್ನು ಗ್ರಾಮದ ಜನರಿಗೆ ನೀಡಿದರು.
27-12-21ರಂದು ಶ್ರೀಮತಿ ಅರುಣಾ ಕಣ್ಣನ್ ದೈಹಿಕ ಶಿಕ್ಷಕರು ಶಾರದಾ ವಿದ್ಯಾನಿಕೇತನ ತಲಪಾಡಿ. ಇವರು ವಿದ್ಯಾರ್ಥಿಗಳಲ್ಲಿ ಸ್ವಯಂ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿದರು.


28-12-21ರಂದು ಡಾ.ಸ್ವಪ್ನ ಡಿ. ಸಂಹಿತ ಸಿದ್ಧಾಂತ, ಶಾರದಾ ಆಯುರ್ವೇದ ಕಾಲೇಜು ಇವರು. ಸಮತೋಲನ ಆಹಾರದ ಬಗೆಗಿನ ಮಾಹಿತಿಯನ್ನು ನೀಡಿದರು. ಹಾಗೂ 7 ದಿನಗಳ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಕಾಲೇಜಿನ ಸ್ವಚ್ಛತಾ ಕಾರ್ಯಕ್ರಮ, ಶಾಲಾ ಕೈತೋಟ ನಿರ್ಮಾಣ, ಹಾಗೂ ಉಪಹಾರಗೃಹದಲ್ಲಿ ಚಿತ್ರಕಲೆಯ ಮೂಲಕ ಸ್ವಚ್ಛತ ಅಭಿಯಾನದ ಬರಹವನ್ನು ಬರೆದರು.


31-12-21ರಂದು ಮಂಜುನಾಥ್ ಮಲೆನಾಡು ಕಲೆ ಮತ್ತು ಕರಕುಶಲ ವಿಭಾಗ ಶಾರದ ವಿದ್ಯಾನಿಕೇತನ ತಲಪಾಡಿ. ಇವರು ಪೌರಾಣಿಕ ಕಥಾ ಭಾಗದ ತುಣುಕನ್ನು ಅಭಿನಯಿಸಿ ತೋರಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೆಂಕಿ ಮತ್ತು ಸುರಕ್ಷತೆಯ ಬಗ್ಗೆ ಶ್ರೀ ಸತ್ಯಜಿತ್ ಫಸ್ಟ್ ನ್ಯೂರೋ ಆಸ್ಪತ್ರೆ ಇವರು ಮಾಹಿತಿ ನೀಡಿದರು.






ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಡಾ.ಮೀನಾ ಜೆ ಪಣಿಕ್ಕರ್ ಇವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಸೂರಾಜ್ ಎಂ ದೇವಾಡಿಗ, ಅಮಿತ ಆಳ್ವ ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ಯದರ್ಶಿಗಳಾದ ಶ್ರವಣ್ ಆಚಾರ್ಯ, ಮತ್ತು ದಿಶಾ ಕೆ.ಬಿ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು