4:54 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ವಿವೇಕ ಸಪ್ತಾಹ: ಮಂಗಳೂರಿನಲ್ಲಿ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ

15/01/2022, 01:16

ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ವಿವೇಕ ಸಪ್ತಾಹದ ಪ್ರಯುಕ್ತ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ ಶುಕ್ರವಾರ ಕೆನರಾ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.





ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಪೊಲೀಸ್ ಕಮಿಷನರ್
ಶಶಿಕುಮಾರ್ ನೆರವೇರಿಸಿ ದುಶ್ಚಟಗಳಿಗೆ ಬಲಿಯಾಗದಂತೆ ವಿದ್ಯಾರ್ಥಿ ಜೀವನವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಮನದಟ್ಟು ಮಾಡಿದರು.

ಮುಖ್ಯ ಅತಿಥಿಯಾಗಿ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಮಾತನಾಡಿ ಮಾದಕ ದ್ರವ್ಯದ ವ್ಯಾಸನಿಗಳಾಗಿ ಮುಂದಿನ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ವಿವೇಕಾನಂದರು ರಾಷ್ಟ್ರದ ಶಕ್ತಿಯೇ ಯುವಕರು ಎಂದು ಅವರು ಹೇಳಿದ್ದರು.. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಗೊಂಡು ಮಾದಕ ವಸ್ತುಗಳ ದಾಸರಾಗದೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಿ.ಎಂದು ಅವರು ಹೇಳಿದರು.

ಕೆನರಾ ಹೈಸ್ಕೂಲ್ ಅಸೋಶಿಯೇಷನ್ ಪರ್ಯಾಯ ಖಜಾಂಜಿ ಪುರುಷೋತ್ತಮ,ಕೆನರಾ ಕಾಲೇಜಿನ ರಾ. ಸೆ. ಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ.ಯು.ಎಸ್ ಉಪಸ್ಥಿತರಿದ್ದರು.


ಸಮಾಪನ್ಮೂಲ ವ್ಯಕ್ತಿ ಯಾಗಿ, ಫಾದರ್ ಮುಲ್ಲರ್ ಆಸ್ಪತ್ರೆಯ ಮಾನಸಿಕ ವಿಭಾಗದ ಡಾ.ಅವಿನಾಶ್ ಜಾಯಿ ಮಾದಕ ದ್ರವ್ಯದ ವ್ಯಸನದಿಂದ ಅರೋಗ್ಯದ ಮೇಲಾಗುವ ದುಷ್ಪಾರಿಣಾಮದ ಬಗ್ಗೆ
ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ.ವಿ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು