4:44 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಂಗಳೂರು ನಗರ ಪೊಲೀಸರಿಗೆ ವೆರಿಕೋಸ್ ವೆನ್ಸ್ ಕುರಿತು ಒಂದು ದಿನದ ಕಾರ್ಯಾಗಾರ; ಉಚಿತ ತಪಾಸಣೆ 

19/01/2022, 20:03

ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವೆರಿಕೋಸ್ ವೆನ್ಸ್ ನ ಬಗ್ಗೆ ಒಂದು ದಿನದ ಕಾರ್ಯಾಗಾರ ಹಾಗೂ ಉಚಿತ ತಪಾಸಣೆ ಮಂಗಳವಾರ ಜರುಗಿತು.


ಪೊಲೀಸ್ ಉಪ ಆಯುಕ್ತ ಹರಿರಾಮ್ ಶಂಕರ್ ಮಾತನಾಡಿ, ಪೊಲೀಸ್ ಕರ್ತವ್ಯದಲ್ಲಿ ಮಾನಸಿಕ ಸಾಮರ್ಥ್ಯ ಎಷ್ಟು ಅಗತ್ಯವೋ ದೈಹಿಕ ಸಾಮರ್ಥ್ಯವೂ ಅಷ್ಟೇ ಅಗತ್ಯವಾಗಿರುತ್ತದೆ. ಪೋಲೀಸ್ ವೃತ್ತಿಗೆ  ಸೇರುವ ಮೊದಲು ಎಲ್ಲಾ ಮಾನದಂಡಗಳಲ್ಲಿ ಪರೀಕ್ಷಿಸಿ ಪರಿಶೀಲಿಸಿ ಅವರುಗಳನ್ನು ಕರ್ತವ್ಯಕ್ಕೆ ತೆಗೆದುಕೊಳ್ಳುತ್ತಾರೆ. ಆದರೆ ಕಾಲಕ್ರಮೇಣ ವೈಯಕ್ತಿಕ ಜೀವನ ಹಾಗೂ ದೈಹಿಕ ಆರೋಗ್ಯವನ್ನು ಸಂಪೂರ್ಣವಾಗಿ ಮರೆತುಬಿಡುತ್ತಾರೆ. ಹಾಗಾಗಿ ಕೆಲವೊಮ್ಮೆ ಇಂಥ ಸೌಲಭ್ಯಗಳನ್ನು ಸರ್ಕಾರದಿಂದ ಅಥವಾ ಇಲಾಖೆಯಲ್ಲಿ ಕಲ್ಪಿಸಿಕೊಟ್ಟರೆ ಇದರ ಸಂಪೂರ್ಣ ಫಲವನ್ನು ಪಡೆಯಬೇಕಾಗಿ ತಿಳಿಸಿದರು.

ಜೊತೆಗೆ ಈಗಾಗಲೇ ಇಲಾಖೆಯಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹಲವು ರೀತಿಯ ದೈಹಿಕ ಆರೋಗ್ಯದ ಮೇಲೆ ಗಮನ ಹರಿಸುವಂತೆ ಹಲವಾರು ಕಾರ್ಯಕ್ರಮಗಳನ್ನು ನಿಯೋಜಿಸುವುದರ ಬಗ್ಗೆ ಈಗಾಗಲೇ ಪೊಲೀಸ್ ಆಯುಕ್ತರಲ್ಲಿ ಚರ್ಚಿಸಿರುವುದಾಗಿ ತಿಳಿಸಿದರು.

ಇಂದಿನ ಕಾರ್ಯಾಗಾರ ಹಾಗೂ ತಪಾಸಣಾ ಶಿಬಿರದಲ್ಲಿ ಸಂಪೂರ್ಣವಾಗಿ ಆಯುರ್ವೇದ ಮುಖೇನ ಆಗಿರುವುದರಿಂದ ಸ್ವತಹ ನನ್ನ ತಾಯಿ ಕೂಡ ಆಯುರ್ವೇದ ಪಂಡಿತೆಯಾಗಿದ್ದು ಆಯುರ್ವೇದದ ಮೇಲೆ ನನಗೆ ನಂಬಿಕೆ ಇದೆ.ಎಂದರು.
ಕಾರ್ಯಾಗಾರದ ಮತ್ತು ತಪಾಸಣಾ ಸೌಲಭ್ಯ ವನ್ನು ಸಂಪೂರ್ಣ ವಾಗಿ ಸದುಪಯೋಗ ಮಾಡಿಕೊಳ್ಳಿ ಎಂದು ಅವರು ಹೇಳಿದರು.

ಕಾರ್ಯಕ್ರಮದ ಆಯೋಜಕಿ ಸುಶ್ಮಿತಾ ಅವರು ಪೊಲೀಸ್ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿ, ಆರೋಗ್ಯ ಸಂಬಂಧ ಕಾರ್ಯಕ್ರಮ ಹಾಗೂ ಚಟುವಟಿಕೆ ನಡೆಸಿದರು.

ಅಪರಾಧ ವಿಭಾಗ ಡಿ. ಸಿ.ಪಿ ದಿನೇಶ್ ಕುಮಾರ್ ಉಪಸ್ಥಿತರಿದ್ದರು. ಟ್ರಾಫಿಕ್ ಎಸಿಪಿ ನಟರಾಜ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು